News Kannada
Thursday, June 08 2023
ಮೈಸೂರು

ಪಿರಿಯಾಪಟ್ಟಣ: ಕಡತ ಯಜ್ಞ ಎಂಬ ವಿನೂತನ ಕಾರ್ಯಕ್ರಮ

Workshop in collaboration with officers and staff of Revenue and Land Survey Department
Photo Credit : By Author

ಪಿರಿಯಾಪಟ್ಟಣ: ಸಾರ್ವಜನಿಕರು ಹೆಚ್ಚಾಗಿ ಭೂ ಸಮಸ್ಯೆ ಸೇರಿದಂತೆ ತಿದ್ದುಪಡಿ ಮತ್ತು ಇತರೆ ಕೆಲಸ ಕಾರ್ಯಗಳಿಗಾಗಿ ನೀಡಿರುವ ಅರ್ಜಿ ವಿಲೇವಾರಿ ಮಾಡಬೇಕೆಂಬ ಉದ್ದೇಶದಿಂದ ಕಂದಾಯ ಹಾಗೂ ಭೂಮಾಪನ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ಸಹಕಾರದೊಂದಿಗೆ ಕಾರ್ಯಾಗಾರ ಮತ್ತು ಕಡತ ಯಜ್ಞ ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಂಡು ದಾಖಲಾತಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ತಹಶೀಲ್ದಾರ್ ಕುಂಜಿ ಅಹಮದ್ ತಿಳಿಸಿದರು.

ಪಟ್ಟಣದ ತಾಲೂಕು ಆಡಳಿತ ಭವನ ಕಚೇರಿಯಲ್ಲಿ ಕಡತ ವಿಲೇವಾರಿ ಕಾರ್ಯದಲ್ಲಿ ಭಾಗವಹಿಸಿ ಅವರು ಮಾತನಾಡಿದರು, 3 ದಿನಗಳಲ್ಲಿ ವಿಲೇವಾರಿ ಮಾಡುವ ಉದ್ದೇಶದಿಂದ ರಜಾ ದಿನ ನಾಲ್ಕನೇ ಶನಿವಾರ ಸೇರಿದಂತೆ ಮೇ. 26, 27 ಹಾಗೂ 29 ರಂದು ಬಾಕಿ ಉಳಿದಿದ್ದ 500ಕ್ಕೂ ಹೆಚ್ಚು ಕಡತಗಳನ್ನು ಕಂದಾಯ ಇಲಾಖೆ ಮತ್ತು ಭೂಮಾಪನ ಇಲಾಖೆ ಸೇರಿದಂತೆ ಎಲ್ಲಾ ಸಿಬ್ಬಂದಿ ಕರ್ತವ್ಯ ನಿರ್ವಹಿಸಿ 6 ತಿಂಗಳಿಗೂ ಹೆಚ್ಚು ಕಾಲದಿಂದ ಬಾಕಿ ಇರುವ ಮೋಜಿಣಿ ತಿದ್ದುಪಡಿಯ 261 ಕಡತ, 3 ಮತ್ತು 9 ತಿದ್ದುಪಡಿಯ 169 ಹಾಗೂ ಪೈಕಿ ಆರ್ ಟಿಸಿ ಒಟ್ಟುಗೂಡಿಸುವುದರಲ್ಲಿ ಬಾಕಿ ಇರುವ 42 ಕಡತಗಳನ್ನು ವಿಲೇವಾರಿ ಮಾಡಲು ಸಂಬಂಧಿಸಿದ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ ಎಂದರು.

ಈ ಸಂದರ್ಭ ಶಿರಸ್ತೆದಾರ್ ಟ್ರಿಜಾ, ನಂದಕುಮಾರ್ ಕಂದಾಯಾಧಿಕಾರಿ ಪ್ರದೀಪ್, ಶ್ರೀಧರ್ ಸೇರಿದಂತೆ ಎಲ್ಲಾ ಗ್ರಾಮ ಲೆಕ್ಕಿಗರು ಹಾಗೂ ಭೂಮಾಪನ ಇಲಾಖೆ ಸಹಾಯಕ ನಿರ್ದೇಶಕ ಮುನಿಯಪ್ಪ ಮತ್ತು ಮೇಲ್ವಿಚಾರಕ ಮಂಜುನಾಥ್ ಇದ್ದರು.

See also   ಮೈಸೂರು: ಶೂ ಧರಿಸಿ ಗಜಪಡೆಗೆ ಪೂಜೆ ಸಲ್ಲಿಸಿದ ಅರಣ್ಯ ಸಚಿವ ಉಮೇಶ್ ಕತ್ತಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು