ನಂಜನಗೂಡು: ನಗರದ ತಾಲ್ಲೂಕು ಆಡಳಿತ ಭವನದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯನ್ನು ಜಿಲ್ಲಾಧಿಕಾರಿ ಡಾ. ರಾಜೇಂದ್ರ ನಡೆಸಿದರು.
ಶಾಸಕ ದರ್ಶನ್ ಧ್ರುವನಾರಾಯಣ್ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ , ಜಿಲ್ಲಾಧಿಕಾರಿ ಡಾ. ರಾಜೇಂದ್ರ ಮಾತನಾಡಿ, ಮಳೆಯ ಮುಂಜಾಗ್ರತಾ ವಾಗಿ ಕ್ರಮಗಳನ್ನು ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳಬೇಕು. ಮುಂಗಾರು ಮಳೆ ಪ್ರಾರಂಭವಾಗಿದೆ ರೈತರಿಗೆ ಬಿತ್ತನೆ ಬೀಜ ತಲುಪಬೇಕು. ಬೆಳೆಗಳಿಗೆ ಸರಿಯಾದ ಸಂದರ್ಭದಲ್ಲಿ ಔಷಧಿ ವಿತರಣೆ ಆಗಬೇಕು . ಮಳೆ ಬಂದು ಹೆಚ್ಚು ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಬೆಳೆ ವಿಮೆ ಬೆಳೆ ಪರಿಹಾರ ನೀಡಬೇಕು. ಮಳೆಯಿಂದ ಮನೆ ಕುಸಿತವಾದರೆ ತಕ್ಷಣವೇ ತಾಲ್ಲೂಕು ಆಡಳಿತ ಅಧಿಕಾರಿಗಳು ಭೇಟಿ ನೀಡಿ ಸೂಕ್ತ ಪರಿಹಾರ ನೀಡಬೇಕು ಎಂದು ಸೂಚಿಸಿದರು.
ಶಾಲೆ ಕಾಲೇಜುಗಳು ಪ್ರಾರಂಭವಾಗಿದ್ದು, ಸೂಕ್ತವಾಗಿ ಕೊಠಡಿ ನಿರ್ಮಾಣವಾಗಿರಬೇಕು , ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಆರೋಗ್ಯ ಇಲಾಖೆ ಕ್ರಮ ಕೈಗೊಳ್ಳಬೇಕು. ಜೊತೆಗೆ ಸಾರ್ವಜನಿಕ ತುರ್ತು ಕರೆ ನಿಗಮ ಕೇಂದ್ರವನ್ನು ಸ್ಥಾಪಿಸಬೇಕು ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ತಿಳಿಸಿದರು. ಸಭೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.