News Kannada
Saturday, June 03 2023
ಮೈಸೂರು

ಮೈಸೂರು ಜಿಲ್ಲಾ ಕಸಾಪ ಭವನದ ಆವರಣದಲ್ಲಿ ಶ್ರಮದಾನ

Shramdaan at Mysuru District Sahitya Bhavan premises
Photo Credit : By Author

ಮೈಸೂರು: ಅದಮ್ಯ ರಂಗಶಾಲೆಯ ಸಹಭಾಗಿತ್ವದಲ್ಲಿ ನಗರದ ಊಟಿ ರಸ್ತೆಯ ಜೆಎಸ್ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ವಿಜಯನಗರದ ಮೊದಲ ಹಂತದಲ್ಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆವರಣವನ್ನು ಸ್ವಚ್ಛಗೊಳಿಸುವ ಮುಖಾಂತರ ಶ್ರಮದಾನ ಮಾಡಿದರು.

ಸತತ ಸುರಿಯುವ ಮಳೆಯಕಾರಣದಿಂದ ಸಾಹಿತ್ಯ ಭವನದ ಆವರಣದಲ್ಲಿ ಕಳೆಯು ಬೆಳೆದಿತ್ತಲ್ಲದೇ, ಹಲವು ರೀತಿಯ ತ್ಯಾಜ್ಯಗಳು ಚೆಲ್ಲಾಡಿದ್ದವು. ಜಿಲ್ಲಾ ಕಸಾಪ ಅಧ್ಯಕ್ಷರಾದ ಮಡ್ಡೀಕೆರೆ ಗೋಪಾಲ್ ಅವರ ಮನವಿಯ ಮೇರೆಗೆ ಜೆ.ಎಸ್.ಎಸ್. ಕಾಲೇಜಿನ ಎನ್.ಎಸ್.ಎಸ್. ತಂಡ ಸ್ವಚ್ಛತಾ ಕಾರ್ಯ ಕೈಗೊಂಡಿತು. ದಿನವಿಡೀ ಶ್ರಮದಾನ ಮಾಡಿದ ವಿದ್ಯಾರ್ಥಿಗಳು ಸ್ವಚ್ಛತೆಯ ಕಾರ್ಯದ ಜೊತೆಗೆ, ಸಾರ್ವಜನಿಕರಿಗೆ ನೈರ್ಮಲ್ಯದ ಅರಿವು ಮೂಡಿಸುವ ಜೊತೆಗೆ ತಮ್ಮ ಕನ್ನಡ ಪ್ರೇಮವನ್ನು ಮೆರೆದರು.

ಜೆ‌.ಎಸ್.ಎಸ್. ಕಾಲೇಜಿನ ರಾಷ್ಟ್ರೀಯ ಸ್ವಯಂಸೇವಾ ಅಧಿಕಾರಿ ಸಂತೋಷ್ ಕುಮಾರ್ ಅವರ ನೇತೃತ್ವದಲ್ಲಿ ಸುಮಾರು 20 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆವರಣವನ್ನು ಸ್ವಚ್ಛ ಮಾಡಿ, ಸಾಹಿತ್ಯ ಪರಿಷತ್ತಿನಲ್ಲಿ ನಡೆದ ಕಾರ್ಯಕ್ರಮದ ಆಯೋಜಕರು ಮತ್ತು ಭಾಗಿಯಾಗಿದ್ದ ಸಾಹಿತ್ಯ ಪ್ರಿಯರಿಗೂ ಸ್ವಚ್ಛತೆಯ ಅರಿವು ಮೂಡಿಸಿದರು. ಈ ಸ್ವಚ್ಛತೆಯ ಕಾರ್ಯದಲ್ಲಿ ಅದಮ್ಯ ರಂಗಶಾಲೆಯ ಸಂಸ್ಥಾಪಕ ಕಾರ್ಯದರ್ಶಿ ಚಂದ್ರು ಮಂಡ್ಯ ಭಾಗಿಯಾಗಿದ್ದರು.

See also  ಮಡಿಕೇರಿ: ವೈಫಲ್ಯಗಳನ್ನು ಮರೆ ಮಾಚಲು ಮೊಟ್ಟೆ ಎಸೆದಿದ್ದಾರೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು