News Kannada
Tuesday, March 28 2023

ಸಂಪಾದಕರ ಆಯ್ಕೆ

ಕೋವಿಡ್‌ ಹೆಚ್ಚಳ : ರಾಜ್ಯಕ್ಕೆ ಕೇಂದ್ರದಿಂದ ನಿಯಂತ್ರಣ ನಿರ್ದೇಶನ

Covid surge: Centre issues regulatory directive to state
Photo Credit : By Author

ಆರು ರಾಜ್ಯಗಳಿಗೆ ಮುನ್ನೆಚ್ಚರಿಕೆ; ಜ್ವರ, ಉಸಿರಾಟದ ಸಮಸ್ಯೆ ಪ್ರಕರಣಗಳ ಮೇಲೆ ನಿಗಾ ಇಡಲು ಸೂಚನೆ

ಹೊಸದಿಲ್ಲಿ : ದೇಶದಲ್ಲಿ ಮತ್ತೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಟ್ಟುನಿಟ್ಟಾದ ನಿಗಾ ವಹಿಸಲು ಮತ್ತು ಕೋವಿಡ್ ಹರಡುವುದನ್ನು ನಿಯಂತ್ರಿಸಲು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ತಮಿಳುನಾಡು, ಕೇರಳ, ಕರ್ನಾಟಕ ಮತ್ತು ತೆಲಂಗಾಣ ಸೇರಿದಂತೆ ಆರು ರಾಜ್ಯಗಳಿಗೆ ಕೇಂದ್ರ ಸರ್ಕಾರ ಪತ್ರ ಬರೆದಿದೆ.

ಕೇಂದ್ರ ಆರೋಗ್ಯ ಸಚಿವಾಲಯ, ತಮಿಳುನಾಡು, ಕೇರಳ, ಕರ್ನಾಟಕ, ತೆಲಂಗಾಣ, ಗುಜರಾತ್ ಮತ್ತು ಮಹಾರಾಷ್ಟ್ರ ರಾಜ್ಯಗಳಿಗೆ ಕೋವಿಡ್ ಪರೀಕ್ಷೆ ಹೆಚ್ಚಿಸುವಂತೆ, ಹೊಸ ಕೋವಿಡ್ ಪ್ರಕರಣಗಳನ್ನು ಮತ್ತು ಕ್ಲಸ್ಟರ್‌ಗಳ ಮೇಲ್ವಿಚಾರಣೆ ಮಾಡುವಂತೆ ಮತ್ತು ಎಚ್3ಎನ್2 ತರಹದ ಅನಾರೋಗ್ಯ ಮತ್ತು ತೀವ್ರ ಉಸಿರಾಟದ ಸಮಸ್ಯೆ ಇರುವವರ ಮೇಲೆ ನಿಗಾ ಇಡುವಂತೆ ನಿರ್ದೇಶಿಸಿದೆ.
ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಆರು ರಾಜ್ಯಗಳಿಗೆ ಪತ್ರ ಬರೆದಿದ್ದು, ಕಳೆದ ಕೆಲವು ತಿಂಗಳಲ್ಲಿ ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಗಮನಾರ್ಹ ಕುಸಿತವಾಗಿತ್ತು. ಆದರೆ. ಕಳೆದ ಕೆಲವು ದಿನಗಳಿಂದ ಕೋವಿಡ್‌ 3,264 ಪ್ರಕರಣ ವರದಿಯಾಗಿದೆ.

ಕೆಲವು ರಾಜ್ಯಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಳವಾಗುತ್ತಿದ್ದು, ಸ್ಥಳೀಯವಾಗಿ ಸೋಂಕು ಹರಡಿರುವ ಸಾಧ್ಯತೆ ಇದೆ. ಹೀಗಾಗಿ ಅಪಾಯದ ಮೌಲ್ಯ ಮಾಪನ ಆಧಾರಿತ ವಿಧಾನವನ್ನು ಅನುಸರಿಸಿ, ಈ ವರೆಗೂ ಸೋಂಕಿನ ವಿರುದ್ಧದ ಹೋರಾಟದಿಂದ ಆದ ಲಾಭವನ್ನು ಕಳೆದುಕೊಳ್ಳದೆ ಸೋಂಕನ್ನು ನಿಯಂತ್ರಿಸಬೇಕಾಗಿದೆ ಎಂದು ರಾಜೇಶ್ ಭೂಷಣ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

See also  ಬಂಟ್ವಾಳ : ಪಂಜಿಕಲ್ಲು ಬ್ರಹ್ಮ ಬೈದರ್ಕಳ ಜಾತ್ರೋತ್ಸವಕ್ಕೆ ಬಿ. ರಮಾನಾಥ ರೈ ಭೇಟಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು