News Karnataka Kannada
Saturday, April 27 2024
ಸಂಪಾದಕರ ಆಯ್ಕೆ

ಸಿಎಂ ಕುರ್ಚಿಗೆ ಪಟ್ಟುಬಿಡದ ಬಂಡೆ: ಇಂದು ಅದೃಷ್ಟದ ಆಟಕ್ಕೆ ತೆರೆ

Relentless rock for CM chair: Today is the game of chance
Photo Credit :

ನವದೆಹಲಿ: 2020ರಲ್ಲಿ ಪಕ್ಷದ ಸಾರಥ್ಯವನ್ನು ಯಾರು ವಹಿಸಿಕೊಳ್ಳಲು ಸಿದ್ಧರಿಲ್ಲದ ವೇಳೆ ನಾನು ವಹಿಸಿಕೊಂಡು ಪಕ್ಷ ಬಹುಮತ ಗಳಿಸುವಂತೆ ಮಾಡಿದ್ದೇನೆ. ಹೀಗಾಗಿ ನನಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಕರ್ನಾಟಕ ಕಾಂಗ್ರೆಸ್ ಮುಖ್ಯಸ್ಥ ಡಿ.ಕೆ. ಶಿವಕುಮಾರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹೇಳಿದ್ದಾರೆ.
ನನಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಇಲ್ಲದೇ ಹೋದಲ್ಲಿ ನೀವೇ ಮುಖ್ಯಮಂತ್ರಿ ಆಗಿ ಎಂದು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹೊಸ ದಾಳ ಉರುಳಿಸಿದ್ದಾರೆ.

ಖರ್ಗೆ ಅವರನ್ನು ಭೇಟಿ ಮಾಡಿದ ಶಿವಕುಮಾರ್, ಸುಮಾರು 45 ನಿಮಿಷಗಳ ಕಾಲ ಮಾತುಕತೆ ನಡೆಸಿದರು. ರಾಜ್ಯದಲ್ಲಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿದ್ದೇನೆ. 2018ರಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಪಕ್ಷ ಸೋತಿತ್ತು ಎಂಬುದನ್ನು ಅವರಿಗೆ ವಿವರಿಸಿದ್ದಾರೆ. ಸಿಎಂ ಹುದ್ದೆ ನೀಡದಿದ್ದಲ್ಲಿ ಬೇರಾವುದೇ ಸ್ಥಾನ ಬೇಡ ಕೇವಲ ಶಾಸಕನಾಗಿ ಮುಂದುವರಿಯುತ್ತೇನೆ ಎಂದು ಕಡ್ಡಿ ಮುರಿದಂತೆ ಡಿ.ಕೆ. ಶಿವಕುಮಾರ ಹೇಳಿದ್ದಾರೆ. ಇಷ್ಟೆಲ್ಲ ವಿವರಿದರೂ ಡಿ.ಕೆ. ಶಿವಕುಮಾರ್‌ ಅವರಿಗೆ ಮುಖ್ಯಮಂತ್ರಿ ಸ್ಥಾನದ ಕುರಿತು ಯಾವುದೇ ಭರವಸೆ ಖರ್ಗೆ ಅವರ ಕಡೆಯಿಂದ ದೊರೆತಿಲ್ಲ ಎನ್ನಲಾಗಿದೆ. ಈ ನಡುವೆ ಬುಧವಾರ ಬೆಂಗಳೂರಿನಲ್ಲಿ ನೂತನ ಮುಖ್ಯಮಂತ್ರಿ ಘೋಷಣೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.

ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಅವರೊಂದಿಗೆ ಮಾತುಕತೆ ಬಳಿಕ ರಾಹುಲ್ ಗಾಂಧಿ, ಸಂಘಟನೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮತ್ತು ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯನ್ನು ನಿರ್ಧರಿಸಲು ಪಕ್ಷದ ಮುಖ್ಯಸ್ಥರೊಂದಿಗೆ ಸುದೀರ್ಘ ಚರ್ಚೆ ನಡೆಸಿದರು. ಒಂದೂವರೆ ಗಂಟೆಗೂ ಹೆಚ್ಚು ಕಾಲ ಕಾಂಗ್ರೆಸ್ ಹಿರಿಯ ನಾಯಕರ ಸಭೆ ನಡೆಯಿತು.
ರಹಸ್ಯ ಮತದಾನದ ಆಧಾರದಲ್ಲಿ ರಾಹುಲ್‌ ಗಾಂಧಿ ಮತ್ತು ಸೋನಿಯಾ ಅವರು ಸಿಎಂ ಸ್ಥಾನವನ್ನು ನಿರ್ಧರಿಸಲಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ರಹಸ್ಯ ಮತದಾನದಲ್ಲಿ ಹೆಚ್ಚಿನ ಶಾಸಕರು ಸಿದ್ದರಾಮಯ್ಯ ಪರವಿದ್ದರೂ ಶಿವಕುಮಾರ್‌ ಮಣಿದಿಲ್ಲ. ಪಕ್ಷಕ್ಕೆ ಗೆಲುವು ತಂದುಕೊಟ್ಟ ಪಾಯಿಂಟ್‌ ಮುಂದಿರಿಸಿ ನನಗೆ ಸಿಎಂ ಸ್ಥಾನ ನೀಡಬೇಕು ಎಂದು ಒತ್ತಾಯಿಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು