News Kannada
Tuesday, October 03 2023
ದೆಹಲಿ

ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ 15 ಆಟಗಾರರ ತಂಡ : ಬಿಸಿಸಿಐ

india cricket 09082021
Photo Credit :

ನವದೆಹಲಿ: ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ 15 ಆಟಗಾರರ ಟೀಂ ಇಂಡಿಯಾ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪ್ರಕಟಿಸಿದೆ.

ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ(ಉಪನಾಯಕ), ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್(ವಿಕೆಟ್ ಕೀಪರ್), ಇಶಾನ್ ಕಿಶನ್(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಾಹುಲ್ ಚಹರ್, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ , ಭುವನೇಶ್ವರ್ ಕುಮಾರ್, ಮೊಹ್ಮದ್ ಶಮಿ  ಹೆಚ್ಚುವರಿ ಆಟಗಾರರಾಗಿ ಶ್ರೇಯಸ್ ಅಯ್ಯರ್, ಶಾರ್ದೂಲ್ ಠಾಕೂರ್, ದೀಪಕ್ ಚಹರ್ ರನ್ನು ಆಯ್ಕೆ ಮಾಡಲಾಗಿದೆ.

ಟಿ20 ವಿಶ್ವಕಪ್ ಟೂರ್ನಿಗೆ ಅಕ್ಟೋಬರ್ 17 ರಂದು ಚಾಲನೆ ಸಿಗಲಿದ್ದು, ನವೆಂಬರ್ 14ರಂದು ಫೈನಲ್ ಪಂದ್ಯ ನಡೆಯಲಿದೆ. ಅಕ್ಟೋಬರ್ 17 ಮೊದಲ ರೌಂಡ್ ಪಂದ್ಯ ಒಮನ್ ಮತ್ತು ಪಿಎನ್​ಜಿ ನಡುವೆ ನಡೆಯಲಿದ್ದು, ಸಾಕಷ್ಟು ರೋಚಕತೆ ಸೃಷ್ಟಿಸಲಿರುವ ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯ ಅಕ್ಟೋಬರ್ 24 ರಂದು ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಟೂರ್ನಿಯ ಮೊದಲ ಸೂಪರ್ 12 ಪಂದ್ಯ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಅ. 23ಕ್ಕೆ ಆರಂಭವಾಗಲಿದೆ ಎಂದು ವರದಿಗಳು ತಿಳಿಸಿವೆ.

See also  ವಿಭಾಗ ಮಟ್ಟದ ಫುಟ್‍ಬಾಲ್ ಪಂದ್ಯಾಟ: ಕೊಡಗು, ದ.ಕ ಜಿಲ್ಲೆ ಚಾಂಪಿಯನ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 5 / 5. Vote count: 1

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು