ಮೊಹಾಲಿ: ಶ್ರೀಲಂಕಾ ವಿರುದ್ಧ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ 141 ರನ್ ಗೆಲುವು ಸಾಧಿಸಿದೆ. ರೋಹಿತ್ ಶರ್ಮಾ ಭರ್ಜರಿ ದ್ವಿಶತಕ ಸಿಡಿಸಿ ವಿಶ್ವದಾಖಲೆ ಮಾಡಿದರು.
ಭಾರತದ ಎದುರು ಟಾಸ್ ಗೆದ್ದ ಶ್ರೀಲಂಕಾ ಬೌಲಿಂಗ್ ನ್ನು ಆಯ್ಕೆ ಮಾಡಿ ಕಣಕ್ಕೆ ಇಳಿದಿತ್ತು. ಆರಂಭದಲ್ಲಿ ಎಚ್ಚರಿಕೆಯ ಆಟವಾಡಿದ ಭಾರತೀಯ ಬ್ಯಾಟ್ಸ್ಮನ್ಗಳು ಬೃಹತ್ ಮೊತ್ತದತ್ತ ಹೆಜ್ಜೆ ಹಾಕಿದರು. ಶಿಖರ್ ಧವನ್ ಮತ್ತು ಶ್ರೇಯಸ್ ಅಯ್ಯರ್ ತಾಳ್ಮೆಯ ಆಟವಾಡಿ ಉತ್ತಮ ಅಡಿಪಾಯ ಮಾಡಿಕೊಟ್ಟರು. ರೋಹಿತ್ ಶರ್ಮಾ ದ್ವಿಶತಕ ಸಿಡಿಸಿ ಅತ್ಯಮೂಲ್ಯ ರನ್ ನ್ನು ಟೀ ಇಂಡಿಯಾಕ್ಕೆ ನೀಡಿದರು.
ಕೊನೆಯಲ್ಲಿ ಭಾರತ 50 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 392 ರನ್ ಪಡೆದುಕೊಂಡಿತು. 393 ರನ್ಗಳ ಗೆಲುವಿನ ಗುರಿ ಬೆನ್ನತ್ತಿದ ಶ್ರೀಲಂಕಾ 50 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 251 ರನ್ ಗಳಿಸಿತು.