News Kannada
Tuesday, March 28 2023

ಕ್ರೀಡೆ

ವ್ಯಕ್ತಿತ್ವ ರೂಪಿಸಲು ಕ್ರೀಡೆ ಸಹಕಾರಿ : ಡಾ. ಅಶ್ವಥ್ ನಾರಾಯಣ್

Sports helps in building personality: Dr. Ashwath Narayan
Photo Credit : By Author

ಮಂಡ್ಯ: ಯುವಕರಿಗೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗಿ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವುದಕ್ಕೆ ಕ್ರೀಡೆ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಸಚಿವರಾದ ಡಾ.ಸಿ.ಎನ್.ಅಶ್ವಥ್ ನಾರಾಯಣ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ನೂತನವಾಗಿ ನಿರ್ಮಿಸಿರುವ ಪರಮಪೂಜ್ಯ ಜಗದ್ಗುರು ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಒಳಾಂಗಣ ಕ್ರೀಡಾಂಗಣದ ಉದ್ಘಾಟನೆ ಹಾಗೂ 2022-23ನೇ ಸಾಲಿನ ರಾಜ್ಯ ಮಟ್ಟದ ಖೋ-ಖೋ ಸ್ಪರ್ಧೆಯ ಗ್ರಾಮೀಣ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಕ್ರೀಡೆ ಅಂದರೆ ವೃತ್ತಿಪರ ಕ್ರೀಡೆಯಾಗಬೇಕಿಲ್ಲ. ನಾವು ದಿನನಿತ್ಯ ಆಡುವ ಆಟಗಳು ಕೂಡ ಕ್ರೀಡೆಗಳೇ ಹಾಗಾಗಿ ಎಲ್ಲರೂ ಕ್ರೀಡೆಯಲ್ಲಿ ಪಾಲ್ಗೊಂಡು ದೈಹಿಕವಾಗಿ ಆರೋಗ್ಯವಾಗಿರಿ. ಸಮಾಜದಲ್ಲಿ ಮಕ್ಕಳು ದುಶ್ಚಟಗಳಿಗೆ ಬಲಿಯಾಗದೇ ಉತ್ತಮ ನಾಗರೀಕರಾಗಿ ರೂಪುಗೊಳ್ಳಲು ಕ್ರೀಡೆ ಹಾಗೂ ಇನ್ನಿತರೆ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು. ಇದಕ್ಕೆ ಬೇಕಿರುವ ಮೂಲಭೂತ ವ್ಯವಸ್ಥೆ ಕ್ರೀಡಾಂಗಣ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ನಿರ್ಮಾಣವಾಗಬೇಕು. ಕ್ರೀಡೆ ಒಂದು ದೊಡ್ಡ ಶಕ್ತಿ ಇದ್ದಾಗ. ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು ಎಂದರೆ ಕ್ರೀಡೆ ಅತ್ಯವಶ್ಯಕ. ಕರ್ನಾಟಕದ ೭ ಇಂಜಿನಿಯರಿಂಗ್ ಕಾಲೇಜನ್ನು ಐಐಟಿ ಮಟ್ಟದಲ್ಲಿ ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಅದರಲ್ಲಿ ಕೆ.ಆರ್ ಪೇಟೆಯ ಇಂಜಿಯರಿಂಗ್ ಕಾಲೇಜು ಕೂಡ ಒಂದು ಎಂದು ತಿಳಿಸಿದರು.

ರೇಷ್ಮೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಚಿವರಾದ ಡಾ.ಕೆ.ಸಿ ನಾರಾಯಣಗೌಡ ಅವರು ಮಾತನಾಡಿ ನೂತನವಾಗಿ ನಿರ್ಮಿಸಿರುವ ಒಳಾಂಗಣ ಕ್ರೀಡಾಂಗಣ ಕರ್ನಾಟಕಕ್ಕೆ ಮಾದರಿಯಾಗಲಿ ಎಂದರಲ್ಲದೆ, ಕೆ.ಆರ್ ಪೇಟೆಗೆ ೧೮ ನೂರು ಕೋಟಿ ಅನುದಾನ ತಂದು, ಅಭಿವೃದ್ಧಿ ಪಡಿಸಲು ಶ್ರಮಿಸಿದ್ದೇನೆ. ಇದಕ್ಕೆ ಸಂತೆಬಾಚಹಳ್ಳಿ ಹೋಬಳಿ ಹಾಗೂ ತಾಲ್ಲೂಕಿನ ಎಲ್ಲಾ ಕೆರೆ ಕಟ್ಟೆಗಳು ತುಂಬಿರುವುದು ಸಾಕ್ಷಿ ಎಂದರು.

ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾ ಸಂಸ್ಥಾನದ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಪುರುಷೋತ್ತಮನಂದ ಸ್ವಾಮೀಜಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಡಾ ಅಧ್ಯಕ್ಷ ಕೆ.ಶ್ರೀನಿವಾಸ, ಕೆ.ಆರ್ ಪೇಟೆ ಪುರಸಭಾ ಅಧ್ಯಕ್ಷೆ ಮಹದೇವಿ ನಂಜುಂಡ, ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ, ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.

See also  ಯುಜೀನ್: ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ ನಲ್ಲಿ ಐತಿಹಾಸಿಕ ಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು