News Karnataka Kannada
Tuesday, April 23 2024
Cricket
ಕ್ರೀಡೆ

ನವದೆಹಲಿ:  ಕೆಲಸಕ್ಕೆ ಹಾಜರಾದ ಕುಸ್ತಿಪಟುಗಳು

NEW DELHI: Wrestlers who attended work
Photo Credit : News Kannada

ನವದೆಹಲಿ: ಕುಸ್ತಿ ಫೆಡರೇಶನ್‌ ಅಧ್ಯಕ್ಷರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳಾದ ಭಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಮತ್ತು ವಿನೇಶ್ ಫೋಗಟ್ ಅವರು ರೈಲ್ವೆ ಇಲಾಖೆಯಲ್ಲಿ ತಮ್ಮ ಕರ್ತವ್ಯಕ್ಕೆ ಹಾಜರಾಗಿದ್ದಾರೆ ಎಂದು ಮೂಲಗಳು ಹೇಳಿವೆ.

ವರದಿಗಳ ಪ್ರಕಾರ, ರಿಯೊ ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಸಾಕ್ಷಿ ಮಲಿಕ್ ಮೇ 31 ರಂದು ಬರೋಡಾ ಹೌಸ್ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ ಎಂಬುದು ಉತ್ತರ ರೈಲ್ವೆಯ ಪ್ರಧಾನ ಕಚೇರಿಯ ದಾಖಲೆಗಳ ಮೂಲದಿಂದ ದೃಢಪಟ್ಟಿದೆ.

ಸೋಮವಾರ ಸಾಕ್ಷಿ ಕೂಡ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ. ಆದರೆ ಆಂದೋಲನದಿಂದ ಹಿಂದೆ ಸರಿದಿದ್ದಾರೆ ಎಂಬ ವದಂತಿಗಳನ್ನು ಅವರು ನಿರಾಕರಿಸಿದರು. “ಸುದ್ದಿ ಸಂಪೂರ್ಣ ತಪ್ಪು. ನಾವೇನೂ ಹಿಂದೆ ಸರಿದಿಲ್ಲ. ನ್ಯಾಯಕ್ಕಾಗಿ ನಮ್ಮ ಹೋರಾಟವನ್ನು ನಾವು ಮುಂದುವರಿಸುತ್ತೇವೆ. ಆದರೆ ಕರ್ತವ್ಯಕ್ಕೆ ಹಾಜರಾಗಿದ್ದೇನೆ ಎಂದರು.

ಇದಕ್ಕೂ ಮೊದಲು, ಭಜರಂಗ್, ಸಾಕ್ಷಿ ಮತ್ತು ವಿನೇಶ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಪ್ರತಿಭಟನೆಗೆ ಸಂಬಂಧಿಸಿದ ವಿಷಯದ ಬಗ್ಗೆ ಚರ್ಚಿಸಿದ್ದರು.

ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅಪ್ರಾಪ್ತ ವಯಸ್ಕರು ಸೇರಿದಂತೆ ಹಲವು ಕುಸ್ತಿಪಟುಗಳ ವಿರುದ್ಧ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಭಜರಂಗ್, ಸಾಕ್ಷಿ ಮತ್ತು ವಿನೇಶ್ ಏಪ್ರಿಲ್‌ನಿಂದ ಕುಸ್ತಿಪಟುಗಳೊಂದಿಗೆ ಪ್ರತಿಭಟನೆ ನಡೆಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು