ಬೆಂಗಳೂರು : ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ ಮತ್ತು ಬಿಜೆಪಿ ರಾಜ್ಯ ಕಾರ್ಯಕಾರಣಿಯು ಸೆ.18 ಮತ್ತು 19ರಂದು ದಾವಣಗೆರೆ ನಗರದಲ್ಲಿ ನಡೆಯುತ್ತಿದ್ದು, ಸಂಪೂರ್ಣ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಇಡೀ ನಗರ ಕೇಸರಿಮಯವಾಗಿದೆ. ಈಗಾಗಲೇ ನಗರವನ್ನು ಬಾವುಟ, ಬ್ಯಾನರ್, ಫ್ಲೆಕ್ಸ್, ವಿದ್ಯುತ್ದೀಪಗಳಿಂದ ಸಿಂಗರಿಸಲಾಗಿದ್ದು ಹಬ್ಬದ ಕಳೆ ಬಂದಿದೆ. ನಗರದ ಸುತ್ತಮುತ್ತ ರಸ್ತೆಗಳಲ್ಲಿ ಅಲಂಕಾರ ಮಾಡಲಾಗಿದ್ದು 35 ತಂಡಗಳಲ್ಲಿ ಕಾರ್ಯಕರ್ತರು ಕಾರ್ಯ ನಿರ್ವಹಿಸಿದ್ದಾರೆ. ಈಗಾಗಲೇ ಬಹುತೇಕ ಬಿಜೆಪಿ ರಾಜ್ಯ ಪದಾಧಿಕಾರಿಗಳು ಆಗಮಿಸಿದ್ದು, ಎರಡು ದಿನಗಳ ಕಾಲ ನಡೆಯುವ ಸಭೆಯಲ್ಲಿ ಹಲವು ರೀತಿಯ ತೀರ್ಮಾನಗಳು ಮತ್ತು ಮುಂದಿನ ವಿಧಾನಸಭಾ ಚುನಾವಣೆಗೆ ಬೇಕಾದ ಕಾರ್ಯ ತಂತ್ರಗಳು ಇಲ್ಲಿ ರೂಪಿತವಾಗಲಿವೆ. ಸೆ.18ರಂದು ಸಂಜೆ ಅಪೂರ್ವ ರೆಸಾರ್ಟ್ನಲ್ಲಿ ಪದಾಧಿಕಾರಿಗಳ ಸಭೆಯಲ್ಲಿ ರಾಜ್ಯದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಸೆ.19ರಂದು ತ್ರಿಶೂಲ್ ಕಲಾ ಭವನದಲ್ಲಿ ದಿನಪೂರ್ತಿ ರಾಜ್ಯ ಕಾರ್ಯಕಾರಿಣಿ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪಕ್ಷದ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕಾರಿಣಿಗೆ ಚಾಲನೆ ನೀಡಲಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ರಾಜ್ಯ ಪ್ರಭಾರಿ ಅರುಣ್ ಸಿಂಗ್, ಸಹಪರಭಾರಿ ಡಿ.ಕೆ. ಅರುಣ, ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ. ರವಿ, ಕೇಂದ್ರದ ಸಚಿವರಾದ ಪ್ರಹ್ಲಾದ್ ಜೋಶಿ, ರಾಜೀವ್ ಚಂದ್ರಶೇಖರ್, ಶೋಭಾ ಕರಂದ್ಲಾಜೆ, ಎ. ನಾರಾಯಣ ಸ್ವಾಮಿ, ಭಗವಂತ ಖೂಬಾ, ರಾಜ್ಯದ ಸಚಿವರು, ಶಾಸಕರು, ಸಂಸದರು ಭಾಗವಹಿಸಲಿದ್ದಾರೆ....
Know Moreದಾವಣಗೆರೆ: ಸೆ.18-19 ರಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಬೆಣ್ಣೆನಗರಿ ದಾವಣಗೆರೆಯಲ್ಲಿ ಸಕರ ಸಿದ್ಧತೆಗಳು ಮಾಡಿಕೊಳ್ಳಲಾಗುತ್ತಿದೆ. ಸೆಪ್ಟಂಬರ್ 18ರ ಸಂಜೆ ದಾವಣಗೆರೆಯ ಅಪೂರ್ವ ರೆಸಾರ್ಟ್ನಲ್ಲಿ ಕಾರ್ಯಕಾರಿಣಿ ಸಬೆ ನಡೆಯಲಿದೆ. ಅಂದು...
Know Moreಬಂಟ್ವಾಳ : ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತ ಎನ್ನಲು ಹೆಮ್ಮೆ ಪಡುವ ಕಾಲ ಇದಾಗಿದ್ದು, ಇದರ ಹಿಂದೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಪಕ್ಷವನ್ನು ಕಟ್ಟಿ ಬೆಳೆಸಿದವರ ತ್ಯಾಗ ಬಲಿದಾನದ ಶ್ರಮ ಇದೆ...
Know MoreGet latest news karnataka updates on your email.