News Karnataka Kannada
Wednesday, April 24 2024
Cricket

ಈ ಬಾರಿ ಸರಳ ಮೈಸೂರು ದಸರಾ ಆಚರಣೆ

03-Sep-2021 ಬೆಂಗಳೂರು

ಬೆಂಗಳೂರು: ಮೈಸೂರು ದಸರಾ ಕೇವಲ ಕರ್ನಾಟಕಕ್ಕೆ ಸೀಮಿತವಾಗಿಲ್ಲ, ಇದೊಂದು ಜಗತ್ ಪ್ರಸಿದ್ಧ ಆಚರಣೆಯಾಗಿದ್ದು, ಪ್ರತಿ ವರ್ಷ ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸುತ್ತಾ ಬರುತ್ತಿದ್ದು, ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ಕಳೆದ ಬಾರಿಗಿಂತ ವಿಶೇಷವಾಗಿ ಸರಳ ಹಾಗೂ ಸಾಂಪ್ರದಾಯಿಕವಾಗಿ ಮೈಸೂರು ದಸರಾವನ್ನು ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ಅವರು ಹೇಳಿದರು. ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ  ನಾಡ ಹಬ್ಬ ಮೈಸೂರು ದಸರಾ -2021ರ ಆಚರಣೆ ಕುರಿತಂತೆ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.  ಈ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ರೈತರು ದುಡಿಮೆಯ ನಂತರ ಆಚರಿಸುವ ದಸರಾ ಹಬ್ಬ ಅತ್ಯಂತ ಖುಷಿಯ ಹಾಗೂ ಮಹತ್ವದ ನಾಡಹಬ್ಬವಾಗಿದೆ. ಕೋವಿಡ್ ಹಿನ್ನಲೆಯಲ್ಲಿ ಜನರು ಹಾಗೂ ಸರ್ಕಾರಗಳು ಸಹ ಆರ್ಥಿಕ ಸಮಸ್ಯೆಯಲ್ಲಿ ಸಿಲುಕಿವೆ, ಇಂತಹ ಸಮಯದಲ್ಲಿ ಸಹ ಹಬ್ಬವನ್ನು ಆಚರಿಸಲು ಉದ್ದೇಶಿಸಲಾಗಿದ್ದು, ಜವಬ್ಧಾರಿಯೊಂದಿಗೆ ಪಾರಂಪರಿಕ ದಸರಾ ಆಚರಣೆಯನ್ನು ಸರಳವಾಗಿ ಆಚರಣೆ ಮಾಡಲಾಗುವುದು. ಅದರಲ್ಲಿ ಮುಖ್ಯವಾಗಿ ಚಾಮುಂಡಿ ಬೆಟ್ಟ ಹಾಗೂ ಅರಮನೆ ಆವರಣದಲ್ಲಿ ಅರ್ಥಪೂರ್ಣವಾಗಿ ಆಚರಿಸಬೇಕಾಗಿದೆ ಎಂದು ತಿಳಿಸಿದರು. ಈಗಾಗಲೇ ಕೋವಿಡ್ ಮೂರನೆ ಅಲೆಯ ಬಗ್ಗೆ ತಜ್ಞರು ವರದಿಗಳನ್ನು ಸಲ್ಲಿಸಿದ್ದು, ಈ ಬಗ್ಗೆ ಎಚ್ಚರಿಕೆ ವಹಿಸಲಾಗುವುದು. ತಜ್ಞರು ಕೋವಿಡ್  3ನೇ ಅಕ್ಟೋಬರ್ ಕೊನೆಗೆ ಬರುತ್ತದೆ ಎಂದು ತಿಳಿಸಿದ್ದಾರೆ. ಸೆಪ್ಟೆಂಬರ್ 20ರ ನಂತರ ಕೋವಿಡ್ ಸ್ಥಿತಿಗತಿ ನೋಡಿಕೊಂಡು ದಸರಾವನ್ನು ಮತ್ತಷ್ಟು ಅರ್ಥಪೂರ್ಣವಾಗಿ ಆಚರಿಸುವ  ಬಗ್ಗೆ ತೀರ್ಮಾನ ತೆಗೆದುಕೊಳ್ಳೋಣ. ತಜ್ಞರು ನೀಡಿರುವ  ಸಲಹೆ ಸೂಚನೆಗಳನ್ನು ಪಾಲಿಸುವುದರೊಂದಿಗೆ ಕಳೆದ...

Know More

ದೇಶದಲ್ಲಿ ಡ್ರೋನ್‌ ಉದ್ಯಮ ಪ್ರೋತ್ಸಾಹಕ್ಕೆ ನಿಯಮ ಸರಳೀಕರಿಸಿದ ಸರ್ಕಾರ

26-Aug-2021 ದೇಶ

ನವದೆಹಲಿ, ; ದೇಶದಲ್ಲಿ ಡ್ರೋಣ್ ಉದ್ಯಮವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನಿಯಮಗಳಲ್ಲಿ ಸಾಕಷ್ಟು ಸರಳೀಕರಣ ಮಾಡಲಾಗಿದ್ದು, ಇನ್ನೂ ಮುಂದೆ ಐದು ಅರ್ಜಿ ನಮೂನೆಗಳು ಹಾಗೂ ನಾಲ್ಕು ರೀತಿಯ ಶುಲ್ಕವನ್ನು ವಿಧಿಸಲಾಗಿದೆ. ಡ್ರೋಣ್ ನಿಯಮಾವಳಿ 2021ರನ್ನು ಕೇಂದ್ರ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು