News Kannada
Saturday, December 02 2023
ತಂತ್ರಜ್ಞಾನ

ಕರ್ನಾಟಕದಲ್ಲಿ ಮತ್ತೊಂದು ಕಾರು ಉತ್ಪಾದನಾ ಘಟಕ ಘೋಷಣೆ ಮಾಡಿದ ಟೊಯೊಟಾ

toyota
Photo Credit : News Kannada

ಬೆಂಗಳೂರು: ಭಾರತದಲ್ಲಿ ಕಾರುಗಳ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿರುವ ಟೊಯೊಟಾ ಇಂಡಿಯಾ ಕಂಪನಿಯು 3ನೇ ಕಾರು ಉತ್ಪದನಾ ಘಟಕ ತೆರೆಯುತ್ತಿರುವುದಾಗಿ ಅಧಿಕೃತವಾಗಿ ಘೋಷಣೆ ಮಾಡಿದೆ.

ಬೆಂಗಳೂರು ಹೊರವಲಯದ ಬಿಡದಿಯಲ್ಲಿ ಈಗಾಗಲೇ ಎರಡು ಕಾರು ಉತ್ಪಾದನಾ ಘಟಕಗಳನ್ನು ಹೊಂದಿರುವ ಟೊಯೊಟಾ ಕಂಪನಿಯು ಮೂರನೇ ಘಟಕವನ್ನು ಸಹ ಬಿಡದಿ ಸನೀಹದಲ್ಲಿ ತೆರೆಯಲು ನಿರ್ಧರಿಸಿದೆ. ಹೊಸ ಘಟಕ ಸ್ಥಾಪನೆಗಾಗಿ ರೂ. 3,300 ಕೋಟಿ ಬಂಡವಾಳ ಹೂಡಿಕೆಗೆ ಸಿದ್ದವಾಗಿದ್ದು, ಇದರಿಂದ ಬರೋಬ್ಬರಿ 2 ಸಾವಿರ ಜನರಿಗೆ ಉದ್ಯೋಗ ಸೃಷ್ಠಿಯಾಗಲಿದೆ.

ಭಾರತದಲ್ಲಿ ಕಾರು ಉತ್ಪಾದನೆ ಮತ್ತು ಮಾರಾಟ ಆರಂಭಿಸಿ 25 ವರ್ಷ ಪೂರೈಸಿರುವ ಟೊಯೊಟಾ ಕಂಪನಿಯು ಹಲವಾರು ಮಾರಾಟ ದಾಖಲೆಗಳನ್ನು ಸಾಧಿಸಿದ್ದು, ಇದೀಗ ಹೊಸ ಕಾರು ಉತ್ಪಾದನಾ ಘಟಕದ ಮೂಲಕ ವಾರ್ಷಿಕವಾಗಿ 4 ಲಕ್ಷ ಕಾರುಗಳನ್ನು ಉತ್ಪಾದನೆ ಮಾಡುವ ಗುರಿಹೊಂದಿದೆ.

ಇದಲ್ಲದೆ ಭಾರತದಲ್ಲಿ ಟೊಯೊಟಾ ಕಂಪನಿಯು ಮುಂಬರುವ ದಿನಗಳಲ್ಲಿ ಕರೊಲ್ಲಾ ಕ್ರಾಸ್ ಎಸ್ ಯುವಿ ಸೇರಿದಂತೆ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಇವು ಹಲವಾರು ವಿಶೇಷತೆಗಳೊಂದಿಗೆ ಭರ್ಜರಿ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿವೆ.

See also  'ವಿಡಿಯೋ ಮೆಸೇಜ್': ವಾಟ್ಸ್​ಆ್ಯಪ್ ಚಾಟ್​ನಲ್ಲಿ ಬಂದಿದೆ ಹೊಸ ಫೀಚರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು