News Kannada
Sunday, September 24 2023
ದೇಶ-ವಿದೇಶ

ಎಂಡೋಸಲ್ಫಾನ್ ಸಂತ್ರಸ್ಥರಿಗೆ ಮೂರು ತಿಂಗಳೊಳಗೆ ನಷ್ಟ ಪರಿಹಾರ ನೀಡಲು ಸುಪ್ರೀಂ ಆದೇಶ

Photo Credit :

ಎಂಡೋಸಲ್ಫಾನ್ ಸಂತ್ರಸ್ಥರಿಗೆ ಮೂರು ತಿಂಗಳೊಳಗೆ ನಷ್ಟ ಪರಿಹಾರ ನೀಡಲು ಸುಪ್ರೀಂ ಆದೇಶ

ಕಾಸರಗೋಡು/ಹೊಸದಿಲ್ಲಿ: ಎಂಡೋಸಲ್ಫಾನ್ ಸಂತ್ರಸ್ಥರಿಗೆ ಮೂರು ತಿಂಗಳೊಳಗೆ ನಷ್ಟ ಪರಿಹಾರ ನೀಡುವಂತೆ  ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

SC rules in favour of endosulfan victims, companies to compensate in 3 months-1ಓರ್ವ ಸಂತ್ರಸ್ಥರಿಗೆ ತಲಾ ಐದು ಲಕ್ಷ ರೂ. ನೀಡಬೇಕು.  ಕೀಟನಾಶಕ ಕಂಪೆನಿಗಳಿಂದ ಈ ಮೊತ್ತವನ್ನು ಸರಕಾರ ವಸೂಲು ಮಾಡಬೇಕು.  ಮೊತ್ತವನ್ನು ಕಂಪೆನಿ ನೀಡದಿದ್ದಲ್ಲಿ ಕೇಂದ್ರ ಸರಕಾರಕ್ಕೆಮೊರೆ ಹೋಗಬಹುದು ಎಂದು ತೀರ್ಪಿನಲ್ಲಿ ತಿಳಿಸಿದೆ. ಸಂತ್ರಸ್ಥರಿಗೆ ಅಜೀವಾವಧಿ ಚಿಕಿತ್ಸೆ, ವೈದ್ಯರ ಸೇವೆ ನೀಡಬೇಕು ಎಂದು ತೀರ್ಪು ನೀಡಿದೆ. ಈ ಬಗ್ಗೆ ಕಂಪೆನಿಗಳಿಗೆ ನ್ಯಾಯಾಲಯ ನೋಟಿಸ್ ಕಳುಹಿಸಿದೆ.  ರಾಜ್ಯ ಸರಕಾರ  ಅಗತ್ಯ ಕ್ರಮ ಗಳನ್ನು  ಮುಂದುವರಿಸುವಂತೆ ಆದೇಶ ನೀಡಿತು. ಈ ಕುರಿತು ಯುವ ಸಂಘಟನೆಯಾದ ಡಿ ವೈ ಎಫ್ ಐ  ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿದ  ಮುಖ್ಯ ನ್ಯಾಯಾಧೀಶ  ಜೆ .ಎಸ್ ಖೆಹರ್ ಅಧ್ಯಕ್ಷತೆಯ ವಿಭಾಗೀಯ ಪೀಠ ಈ ತೀರ್ಪು ನೀಡಿದೆ.

ಸಂತ್ರಸ್ಥರಿಗೆ ಜೀವಾನುದುದ್ದಕ್ಕೂ ವೈಕಲ್ಯವನ್ನು ಎದುರಿಸಬೇಕಾಗಿ ಬರಲಿದ್ದು ಇದರಿಂದ ನಷ್ಟ ಪರಿಹಾರ ಡಿವೈಎಫ್ ಐ ಒತ್ತಾಯಿಸಿತ್ತು. ರಾಜ್ಯ ಸರಕಾರವು ತಲಾ ಐದು ಲಕ್ಷ ರೂ. ನಷ್ಟ ಪರಿಹಾರ ನೀಡುವಂತೆ ರಾಷ್ಟ್ರೀಯ ಮಾನವ ಹಕ್ಕು ಆಯೋಗ ಆದೇಶ ನೀಡಿರುವ ಬಗ್ಗೆ ಕಂಪೆನಿ  ನ್ಯಾಯಾಲಯದ ಗಮನಕ್ಕೆ ತಂದಿತ್ತು.

ಆದರೆ ಸರಕಾರ  ನಷ್ಟ ಪರಿಹಾರ  ನೀಡಲು ಸರಕಾರ ಯಾಕೆ ವಿಳಂಬ ಉಂಟು ಮಾಡುತ್ತಿದೆ ಎಂದು ನ್ಯಾಯಾಲಯ ಪ್ರಶ್ನಿಸಿತು. 458 ಕೋಟಿ ರೂ .ಗಳ  ಪ್ಯಾಕೇಜ್  ರಾಜ್ಯ ಸರಕಾರ ಕೇಂದ್ರಕ್ಕೆ ಸಲ್ಲಿಸಿರುವುದಾಗಿ  ಕಂಪೆನಿ ಗಮನಕ್ಕೆ ತಂದಿದ್ದು. ಇದರಿಂದ ನಷ್ಟ ಪರಿಹಾರಕ್ಕೆ ಕೇಂದ್ರ ಸರಕಾರವನ್ನು  ಸಮೀಪಿಸಬಹುದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿತು.

ಎಂಡೋ ಸಲ್ಫಾನ್ ಉತ್ಪಾದಕ ಸಂಘಟನೆಯಾದ ಸೆಂಟ್ರಲ್ ಎನ್ವಾರ್ನ್ ಮೆಂಟ್ ಆಂಡ್  ಆಗ್ರೋ  ಕೆಮಿಕಲ್ಸ್ ಗೆ  ನ್ಯಾಯಾಲಯ ನಿಂದನೆಗೆ ನೋಟಿಸ್ ಕಳುಹಿಸಿದೆ.

See also  ಉತ್ತರ ಪ್ರದೇಶ: ಕ್ರಿಸ್ ಮಸ್, ನ್ಯೂ ಇಯರ್ ಆಚರಿಸದಂತೆ ಹಿಂದೂ ಜಾಗರಣ ಬೆದರಿಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು