ನವದೆಹಲಿ: ಆರ್ಥಿಕ ತಜ್ಞ ಹಾಗೂ ಖ್ಯಾತ ಅಂಕಣಕಾರ ಸುರ್ಜಿತ್ ಭಲ್ಲಾ ಟವರು ಪ್ರಧಾನಮಂತ್ರಿಗಳ ಆರ್ಥಿಕ ಸಲಹಾ ಮಂಡಳಿಗೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಈ ಸಂಬಂಧ ಸ್ವತಃ ಸುರ್ಜಿತ್ ಭಲ್ಲಾ ಅವರೇ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿದ್ದಾರೆ. ಡಿಸೆಂಬರ್ 1ರಂದು ಪ್ರಧಾನಮಂತ್ರಿಗಳ ಆರ್ಥಿಕ ಸಲಹಾ ಮಂಡಳಿಗೆ ರಾಜೀನಾಮೆ ನೀಡಿದ್ದೆ ಎಂದು ಹೇಳಿದ್ದಾರೆ.
ಪ್ರಸ್ತುತ ನೀತಿ ಆಯೋಗದ ಸದಸ್ಯ ಬಿಬೇಕ್ ದೆಬ್ರಾಯ್ ಅವರ ನೇತೃತ್ವದ ಆರ್ಥಿಕ ಸಲಹಾ ಮಂಡಳಿಯಲ್ಲಿ ಪ್ರಸ್ತುತ ಆರ್ಥಿಕ ತಜ್ಞರಾದದ ರಥಿನ್ ರಾಯ್, ಅಶಿಮಾ ಗೋಯಾಲ್ ಹಾಗೂ ಶಮಿಕಾ ರವಿ ಸದಸ್ಯರಾಗಿದ್ದಾರೆ.