ಅಯೋಧ್ಯೆ: ಅಯೋಧ್ಯೆ ರಾಮ ಜನ್ಮಭೂಮಿ ವಿರುದ್ಧ ದಾವೆ ಹೂಡಿದ ಇಕ್ಬಾಲ್ ಅನ್ಸಾರಿ ಮತ್ತು ಪದ್ಮಶ್ರೀ ಮೊಹಮ್ಮದ್ ಶರೀಫ್ ಅವರನ್ನು ಅಯೋಧ್ಯೆಯಲ್ಲಿ ಆ.5ರಂದು ನಡೆಯಲಿರುವ ಭೂಮಿ ಪೂಜೆ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.
ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರು ಈ ಬಗ್ಗೆ ಮಾಹಿತಿ ನೀಡಿದರು.
ಆಗಸ್ಟ್ 5ರಂದು ನಡೆಯಲಿರುವ ಭೂಮಿ ಪೂಜೆ ಕಾರ್ಯಕ್ರಮಕ್ಕೆ ನಾವು ಇಕ್ಬಾಲ್ ಅನ್ಸಾರಿ ಮತ್ತು ಪದ್ಮಶ್ರೀ ಮೊಹಮ್ಮದ್ ಶರೀಫ್ ಅವರನ್ನು ಆಹ್ವಾನಿಸುತ್ತಿದ್ದೇವೆ ಎಂದು ಅವರು ಹೇಳಿದರು.
ಇಂದು ಗೌರಿ ಗಣೇಶ ಪೂಜೆಯ ಮೂಲಕ ಶಿಲಾನ್ಯಾಸ ಕಾರ್ಯಕ್ರಮದ ವಿಧಿವಿಧಾನಗಳು ಆರಂಭವಾಗಿದೆ. ಇಂದು ಬೆಳಗ್ಗೆ 8 ಗಂಟೆಗೆ ಪೂಜೆ ಆರಂಭವಾಗಿದೆ ಮತ್ತು 11 ಗಂಟೆಗೆ ಆರ್ಚಕರು ಮಂತ್ರಘೋಷ ಮೊಳಗಿಸಿದರು.