ನವದೆಹಲಿ: ಸಾಮಾನ್ಯ ವರ್ಗದವರಿಗೆ ಶಿಕ್ಷಣ ಹಾಗೂ ಸರ್ಕಾರಿ ಉದ್ಯೋಗದಲ್ಲಿ ಶೇ.10ರಷ್ಟು ಮೀಸಲಾತಿ ಒದಗಿಸುವ ಕೇಂದ್ರ ಸರ್ಕಾರದ ನಿರ್ಣಯಕ್ಕೆ ತಡೆ ಹೇರಲು ಸುಪ್ರೀಂಕೋರ್ಟ್ ನಿರಾಕರಿಸಿದೆ.
ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಾಧೀಶ ರಂಜನ್ ಗೊಗೊಯಿ ಅವರನ್ನು ಒಳಗೊಂಡಿರುವ ಪೀಠವು ಈ ವಿಚಾರವನ್ನು ಪರಿಶೀಲಿಸುವುದಾಗಿ ಹೇಳಿದೆ.
ಸಾಮಾನ್ಯ ವರ್ಗದವರಿಗೆ ಶೇ.10ರಷ್ಟು ಮೀಸಲಾತಿ ಒದಗಿಸುವುದಕ್ಕೆ ತಡೆ ಹೇರಬೇಕೆಂದು ಸಲ್ಲಿಸಿರುವ ಅರ್ಜಿಯ ವಿಚಾರವಾಗಿ ಸುಪ್ರೀಂಕೋರ್ಟ್ ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿದೆ.