News Kannada
Friday, March 24 2023

ದೇಶ-ವಿದೇಶ

‘ತಲಾಖ್‌’ ಹೆಸರಿನಲ್ಲಿ ಮುಸ್ಲಿಂ ಮಹಿಳೆಯರ ಮೇಲಾಗುತ್ತಿರುವ ಶೋಷಣೆ ನಿಲ್ಲಬೇಕು: ಪ್ರಧಾನಿ ಮೋದಿ

Photo Credit :

'ತಲಾಖ್‌' ಹೆಸರಿನಲ್ಲಿ ಮುಸ್ಲಿಂ ಮಹಿಳೆಯರ ಮೇಲಾಗುತ್ತಿರುವ ಶೋಷಣೆ ನಿಲ್ಲಬೇಕು: ಪ್ರಧಾನಿ ಮೋದಿ

ಭುವನೇಶ್ವರ: ಮುಸ್ಲಿಂ ಮಹಿಳೆಯರ ಮೇಲೆ ತ್ರಿವಳಿ ತಲಾಖ್‌ ಹೆಸರಿನಲ್ಲಿ ಆಗುತ್ತಿರುವ ಶೋಷಣೆ ನಿಲ್ಲಬೇಕು ಮತ್ತು ಅವರಿಗೆ ನ್ಯಾಯ ದೊರೆಯಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

‘ಸಾಮಾಜಿಕ ಜಾಗೃತಿ ಮೂಲಕ ಇದನ್ನು ನಿಭಾಯಿಸಬೇಕು’ ಮತ್ತು ಈ ವಿಚಾರದಲ್ಲಿ ಮುಸ್ಲಿಂ ಸಮುದಾಯದಲ್ಲಿ ‘ಸಂಘರ್ಷ’ ಉಂಟು ಮಾಡುವ ಪ್ರಯತ್ನ ಮಾಡಬಾರದು ಎಂದು ಹೇಳಿದ್ದಾರೆ.

ಎರಡು ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಭುವನೇಶ್ವರದಲ್ಲಿ ಮಾತನಾಡಿದ ಅವರು,  ತ್ರಿವಳಿ ತಲಾಖ್‌ ಪದ್ಧತಿಯಿಂದಾಗಿ ಸಂತ್ರಸ್ತರಾದವರನ್ನು ಭೇಟಿ ಮಾಡಿ ಅವರಲ್ಲಿ ಜಾಗೃತಿ ಮೂಡಿಸುವಂತೆ ಪಕ್ಷದ ಮಹಿಳಾ ಕಾರ್ಯಕರ್ತರಿಗೆ ಕರೆ ನೀಡಿದರು. ಈ ಮಹಿಳೆಯರನ್ನು ಭೇಟಿ ಮಾಡುವ ಅಗತ್ಯವಿದೆ. ಆದರೆ, ಅವರನ್ನು ಪ್ರಚೋದಿಸಬಾರದು ಅಥವಾ ಅವರು ತಮ್ಮ ಧರ್ಮದ ವಿರುದ್ಧವಾಗಿ ಹೋಗುವಂತೆ ಮಾಡಬಾರದು’ ಎಂದು ಕಿವಿ ಮಾತು ತಿಳಿಸಿದರು.

ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರು ಕಾರ್ಯಕಾರಿಣಿ ನಂತರ ಸುದ್ದಿಗೋಷ್ಠಿ ನಡೆಸಿದ್ದು, ಮುಸ್ಲಿಂ ಮಹಿಳೆಯರು ತ್ರಿವಳಿ ತಲಾಖ್‌ನಿಂದಾಗಿ ಶೋಷಣೆಗೆ ಒಳಗಾಗುತ್ತಿದ್ದಾರೆ ಎಂದು ಮೋದಿ ಹೇಳಿದ್ದನ್ನು  ದೃಢಪಡಿಸಿದರು.

ಅವರು (ಮೋದಿ) ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡಿದರು. ನಮ್ಮ ಮುಸ್ಲಿಂ ಸಹೋದರಿಯರಿಗೂ ನ್ಯಾಯಸಿಗಬೇಕು. ಯಾರೊಬ್ಬರನ್ನೂ ಶೋಷಿಸಬಾರದು ಎಂಬುದಾಗಿ ಪ್ರಧಾನಿ ಹೇಳಿದರು’ ಎಂದು ಗಡ್ಕರಿ ವಿವರಣೆ ನೀಡಿದರು.

2022ರ ಹೊತ್ತಿಗೆ, ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯ ಮೂಲಕ ಹೊಸ ಭಾರತದ ನಿರ್ಮಾಣಕ್ಕಾಗಿ ‘ಉದ್ದ ಜಿಗಿತ’ ಮಾಡಲು ಇದು ಸೂಕ್ತ ಕಾಲ ಎಂದು ಮೋದಿ ತಮ್ಮ ಭಾಷಣದಲ್ಲಿ ಹೇಳಿದರು.

ದೇಶದ ಅಭಿವೃದ್ಧಿಗೆ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದ ಅವರು, ಭಾಷಣದ ಉದ್ದಕ್ಕೂ  ಪಕ್ಷದ ‘ಪಿ2–ಜಿ2’ (pro-people, pro – active, good governance) ಕಾರ್ಯಸೂಚಿಗೆ ಹೆಚ್ಚು ಒತ್ತು ನೀಡಿದರು.

ಎಲೆಕ್ಟ್ರಾನಿಕ್‌ ಮತಯಂತ್ರಗಳ ವಿಶ್ವಾಸಾರ್ಹತೆ ವಿವಾದದ ಬಗ್ಗೆ ಪ್ರಸ್ತಾಪಿಸಿದ ಅವರು ವಿರೋಧ ಪಕ್ಷಗಳ ಆರೋಪವನ್ನು ತಳ್ಳಿಹಾಕಿದರು.
ಮುಸ್ಲಿಮರ ಪರ: ಶೀಘ್ರದಲ್ಲಿ ಸಾಂವಿಧಾನಿಕ ಸ್ಥಾನಮಾನ ಪಡೆಯಲಿರುವ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗದಿಂದ ಹಿಂದುಳಿದ ಮುಸ್ಲಿಮರು ಹೆಚ್ಚು ಅನುಕೂಲ ಪಡೆಯುವಂತೆ ನೋಡಿಕೊಳ್ಳಬೇಕು ಎಂದು ಪಕ್ಷದ ಮುಖಂಡರಿಗೆ ಮೋದಿ ಅವರು ಸಲಹೆಯನ್ನೂ ನೀಡಿದರು.

ಕೈಬಿಡಲು ಸಾಧ್ಯವಿಲ್ಲ: ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ

ಲಖನೌ: ಮೂರು ಬಾರಿ ತಲಾಖ್‌ ಹೇಳಿ ಪತ್ನಿಗೆ ವಿಚ್ಛೇದನ ನೀಡುವ ಪದ್ಧತಿಯನ್ನು ಕೈಬಿಡಬೇಕು ಎಂದು ವಿವಿಧ ವರ್ಗಗಳಿಂದ ಬಂದ ಬೇಡಿಕೆಯನ್ನು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್‌ಬಿ) ತಿರಸ್ಕರಿಸಿದೆ.

ಆದರೆ, ‘ಒಂದೇ ಬಾರಿಗೆ ಮೂರು ಸಲ ತಲಾಖ್‌ ಹೇಳಿ’ ಪತ್ನಿಗೆ ವಿಚ್ಛೇದನ ನೀಡುವವರನ್ನು ಸಮಾಜ ಬಹಿಷ್ಕರಿಸಬೇಕು ಎಂದು ಮಂಡಳಿ ಕರೆ ನೀಡಿದೆ.
‘ತಲಾಖ್‌’ ಪದ್ಧತಿಯು ಷರಿಯಾಕ್ಕೆ (ಇಸ್ಲಾಮಿಕ್ ಕಾನೂನು) ಅನುಗುಣವಾಗಿದೆ ಎಂದು ಹೇಳಿರುವ ಮಂಡಳಿ, ತಲಾಖ್‌ ಹೇಳುವಾಗ ಅನುಸರಿಸಬೇಕಾದ ನೀತಿಸಂಹಿತೆ ಯೊಂದನ್ನು ರೂಪಿಸಿದೆ.

See also  ನಾಲ್ಕು ಮಹಡಿ ಕಟ್ಟಡ ಕುಸಿದು 12 ಮಂದಿ ಮೃತ್ಯು

ಮಂಡಳಿಯ ಕಾರ್ಯಕಾರಿ ಸಮಿತಿಯ ಎರಡು ದಿನಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಮುಸ್ಲಿಂ ಮಹಿಳೆಯರಲ್ಲಿ ಕೆಲವರು ತಲಾಖ್‌ ಪದ್ಧತಿಗೆ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಮಂಡಳಿ ಅತೃಪ್ತಿ ವ್ಯಕ್ತಪಡಿಸಿದ್ದು, ‘ಇದು ಸಾಂಸ್ಕೃತಿಕ ದಾಳಿ’ ಎಂದು ಹೇಳಿದೆ.

ವಿಚ್ಛೇದನವು ಷರಿಯಾಕ್ಕೆ ಅನುಗುಣವಾಗಿ ನಡೆದಿರದಿದ್ದರೆ, ಆ ಪ್ರಕರಣಗಳಲ್ಲಿ ತೊಂದರೆಗೆ ಒಳಗಾದವರಿಗೆ ಸಹಾಯ ಮಾಡುವುದಾಗಿ ಅದು ಹೇಳಿದೆ.
ಆಸ್ತಿ ಹಕ್ಕು ಕೊಡಿ: ಹೆಣ್ಣು ಮಕ್ಕಳ ಪಾಲಕರು ಮದುವೆ ಮಾಡಿಕೊಡುವ ಸಂದರ್ಭದಲ್ಲಿ ವರದಕ್ಷಿಣೆ ನೀಡುವ ಬದಲು ಹೆಣ್ಣಿಗೆ ಆಸ್ತಿಯಲ್ಲಿ ಹಕ್ಕು ಕೊಡಬೇಕು ಎಂದು ಹೇಳಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು