News Kannada
Monday, March 27 2023

ದೇಶ-ವಿದೇಶ

ಯಾರೇ ಆಗಿರಲಿ, ತಪ್ಪಿತಸ್ಥರನ್ನು ಪಕ್ಷದಿಂದ ಹೊರಹಾಕಿ: ಪ್ರಧಾನಿ ಮೋದಿ

Photo Credit :

ಯಾರೇ ಆಗಿರಲಿ, ತಪ್ಪಿತಸ್ಥರನ್ನು ಪಕ್ಷದಿಂದ ಹೊರಹಾಕಿ: ಪ್ರಧಾನಿ ಮೋದಿ

ನವದೆಹಲಿ: ಅಧಿಕಾರಿಯೊಬ್ಬರಿಗೆ ಬ್ಯಾಟ್ ನಿಂದ ಹಲ್ಲೆ ಮಾಡಿರುವ ಆಕಾಶ್ ವಿಜಯವರ್ಗೀಯ ಅವರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂತಹ ಕೃತ್ಯಗಳನ್ನು ಸಹಿಸಲು ಸಾಧ್ಯವಿಲ್ಲ. ಆತ ಯಾರ ಮಗನೇ ಆಗಿದ್ದರೂ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಈ ರೀತಿ ವರ್ತಿಸುವವರನ್ನು ಪಕ್ಷದಿಂದ ನಿರ್ದಾಕ್ಷಿಣ್ಯವಾಗಿ ತೆಗೆಯಿರಿ ಎಂದು ನಿರ್ದೇಶಿಸಿದ್ದಾರೆ.

ಸಂಸದೀಯ ಸಭೆಯ ಬಳಿಕ ಬಿಜೆಪಿ ನಾಯಕ ರಾಜೀವ್ ಪ್ರತಾಪ್ ರೂಢಿ ಅವರು ಮಾಧ್ಯಮಗಳಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಇಂತಹ ನಡವಳಿಕೆಗಳು ಸ್ವೀಕಾರಾರ್ಹವಲ್ಲ, ಯಾರೇ ಆಗಲಿ, ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ. ಪಕ್ಷಕ್ಕೆ ಕೆಟ್ಟ ಹೆಸರು ತರುವುದನ್ನು ಬಯಸುವುದಿಲ್ಲ. ಇದು ಪ್ರತಿಯೊಬ್ಬರಿಗೂ ಅನ್ವಯವಾಗುವುದು ಎಂದು ಮೋದಿ ಅವರು ಹೇಳಿರುವುದಾಗಿ ರೂಢಿ ತಿಳಿಸಿದರು.

ಮಧ್ಯಪ್ರದೇಶದ ಇಂಧೋರ್ ನ ಶಾಸಕ ಹಾಗೂ ಹಿರಿಯ ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗೀಯಾ ಅವರ ಪುತ್ರ ಆಕಾಶ್ ವಿಜಯವರ್ಗೀಯ ಅವರು ಸರ್ಕಾರಿ ಅಧಿಕಾರಿಗೆ ಬ್ಯಾಟ್ ನಿಂದ ಗಂಭೀರವಾಗಿ ಹಲ್ಲೆ ಮಾಡಿದ್ದರು.

See also  ದಾವೂದ್ ಗೆ ಹೃದಯಾಘಾತ ಸಂಭವಿಸಿಲ್ಲ, ಅವರು ಸಂಪೂರ್ಣ ಆರೋಗ್ಯವಾಗಿದ್ದಾರೆ: ಚೋಟಾ ಶಕೀಲ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

187

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು