ವಿಶಾಖಪಟ್ಟಣ: ಆಂಧ್ರ ಪ್ರದೇಶದಲ್ಲಿ 12 ಮಂದಿ ನಕ್ಸಲರು ಪೊಲೀಸರಿಗೆ ಶನಿವಾರ ಶರಣಾಗಿದ್ದಾರೆ.
ಆಂಧ್ರ ಪ್ರದೇಶದ ವಿಶಾಖಪಟ್ಟಣಂನ ಚಿಂತಪಲ್ಲಿ ಪ್ರದೇಶದಲ್ಲಿ 12 ನಕ್ಸಲರು ಪೊಲೀಸರಿಗೆ ಶರಣಾಗಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ ನಕ್ಸಲರು ಚಿಂತಪಲ್ಲಿ ಎಎಸ್ಪಿ ವಿದ್ಯಾ ಸಾಗರ್ ನಾಯ್ಡು ಅವರ ಸಮ್ಮುಖದಲ್ಲಿ ಪೊಲೀಸರಿಗೆ ಶರಣಾಗಿದ್ದಾರೆ.
ಎಎಸ್ಪಿ ವಿದ್ಯಾ ಸಾಗರ್ ನಾಯ್ಡು ಮಾಧ್ಯಮಗಳಿಗೆ ಮಾಹಿತಿ ನೀಡಿ, ‘ಜನರನ್ನು ಮಾಹಿತಿದಾರರೆಂದು ಶಂಕಿಸುವುದು ಮತ್ತು ಊಹಾಪೋಹಗಳ ಆಧಾರದ ಮೇಲೆ ಜನರನ್ನು ಹತ್ಯೆ ಮಾಡುವ ಅನಾಗರಿಕ ಕೃತ್ಯಗಳಿಂದ ಇವರು ಬೇಸರಗೊಂಡಿದ್ದರು. ವೈಜಾಗ್ ಸುತ್ತಲಿನ ಅನೇಕ ಗ್ರಾಮಗಳಲ್ಲಿ ಮಾವೋವಾದಿಗಳ ಒತ್ತಡದ ಮೇರೆಗೆ ಅವರ ಪರ ಕೃತ್ಯಗಳಲ್ಲಿ ನಿರತರಾಗಿದ್ದೆವು ಎಂದು ಶರಣಾದವರು ಹೇಳಿದ್ದಾರೆ’ ಎಂದು ತಿಳಿಸಿದರು.