ಬೆಂಗಳೂರು: ಜಿಂದಾಲ್ ಸಂಸ್ಥೆಗೆ ಸರ್ಕಾರ ಸುಮಾರು 3,667 ಎಕರೆ ಭೂಮಿಯನ್ನು ಹಸ್ತಾಂತರ ಮಾಡಿರುವ ಕ್ರಮದ ವಿರುದ್ಧ ವಕೀಲ ದೊರೆರಾಜು ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧ ಲೀಗಲ್ ನೋಟಿಸ್ ಜಾರಿ ಮಾಡಿದ್ದಾರೆ.
ಸರ್ಕಾರಿ ಜಮೀನನ್ನು ಖಾಸಗಿ ಸಂಸ್ಥೆಗೆ ನೀಡುವ ವಿಚಾರ ಸಂಬಂಧ ಸುದೀರ್ಘ ಚರ್ಚೆ ನಡೆಸದೆ ತರಾತುರಿಯಲ್ಲಿ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಂಡು, ಭೂಮಿ ಹಸ್ತಾಂತರಿಸಿರುವುದು ಕಾನೂನು ಬಾಹಿರವಾಗಿದೆ. ಅಲ್ಲದೆ, ಜಿಂದಾಲ್ ಸಂಸ್ಥೆ ಕಾನೂನುಬಾಹಿರ ಚಟುವಟಿಕೆ ನಡೆಸಿದೆ ಎಂದು ಲೋಕಾಯುಕ್ತ ನೀಡಿರುವ ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ, ಜಿಂದಾಲ್ ಸಂಸ್ಥೆ ಈ ಹಿಂದೆ ಸೌತ್ ವೆಸ್ಟ್ ಕಂಪನಿ ಮೂಲಕ ನಡೆಸಿದ ಗಣಿಗಾರಿಕೆಯಿಂದ ರಾಜ್ಯ ಸರ್ಕಾರಕ್ಕೆ ರೂ.1078 ಕೋಟಿ ರೂಪಾಯಿ ನಷ್ಟವಾಗಿರುವ ಬಗ್ಗೆ ಲೋಕಾಯುುಕ್ತ ವರದಿ ನೀಡಿದೆ. ಹಾಗೆಯೇ ಈ ಸಂಬಂಧ ಹೈಕೋರ್ಟ್, ಸುಪ್ರೀಂಕೋರ್ಟ್ ಮತ್ತು ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದಲ್ಲಿ ಅರ್ಜಿ ಸಲ್ಲಿಸಲಾಗಿದ್ದು, ಕೇಸ್ಗಳು ವಿಚಾರಣೆ ಹಂತದಲ್ಲಿವೆ ಎಂದು ತಿಳಿಸಿದೆ.
ಜಿಂದಾಲ್ ಸಂಸ್ಥೆಗೆ ಸರ್ಕಾರಿ ಭೂಮಿ ನೀಡುವುದರಿಂದ ಪರಿಸರಕ್ಕೆ ದೊಡ್ಡ ಪ್ರಮಾಣದಲ್ಲಿ ಹಾನಿಯಾಗಲಿದೆ. ಅತ್ಯಂತ ಹೆಚ್ಚು ಖನಿಜಾಂಶವುಳ್ಳ ಜಾಗದಲ್ಲಿ ಪ್ರತಿ ಎಕರೆಗೆ ಕೇವಲ ರೂ. 1,22,195 ನಿಗದಿಪಡಿಸಿದ್ದು, ಸರ್ಕಾರಕ್ಕೆ ದೊಡ್ಡ ನಷ್ಟವಾಗಿದೆ. ಆದ್ದರಿಂದ ಸರ್ಕಾರ ತನ್ನ ನಿರ್ಧಾರವನ್ನು ಹಿಂಪಡೆಯಬೇಕು ಎಂದು ನೋಟಿಸ್ನಲ್ಲಿ ತಿಳಿಸಲಾಗಿದೆ. ಹಾಗೆಯೇ, ಬಿ ಎಸ್ ಯಡಿಯೂರಪ್ಪ ಅವರು ಪ್ರತಿಪಕ್ಷ ನಾಯಕರಾಗಿದ್ದ ವೇಳೆ ಜಿಂದಾಲ್ಗೆ ಭೂಮಿ ಮಂಜೂರು ಮಾಡುವುದನ್ನು ವಿರೋಧಿಸಿ, ಇದೀಗ ನೀಡಿರುವುದು ಅಚ್ಚರಿ ತಂದಿದೆ ಎಂದು ತಿಳಿಸಲಾಗಿದೆ.
ಜಿಂದಾಲ್ಗೆ ಭೂಮಿ ಪರಭಾರೆ: ಸಿಎಂ ಯಡಿಯೂರಪ್ಪಗೆ ನೋಟಿಸ್
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.