ತಿರುವನಂತಪುರ: ಆಡಳಿತಾರೂಢ ಸಿಪಿಐ(ಎಂ)ನ ಎಂ.ಬಿ.ರಾಜೇಶ್ ಅವರು ಕೇರಳ ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಮಂಗಳವಾರ ಆಯ್ಕೆಯಾದರು.
ನೂತನ ಸಭಾಧ್ಯಕ್ಷರ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಯುಡಿಎಫ್ನಿಂದ ಸ್ಪರ್ಧಿಸಿದ್ದ ಪಿ.ವಿ.ವಿಷ್ಣುನಾಥ ಕೇವಲ 40 ಮತಗಳನ್ನು ಪಡೆದರೆ ರಾಜೇಶ್ 96 ಮತಗಳನ್ನು ಪಡೆದು ಜಯಗಳಿಸಿದರು.
ಮತದಾನದ ವೇಳೆ ಶಾಸಕರಾದ ಕೆ.ಬಾಬು, ಎಂ.ವಿನ್ಸೆಂಟ್ ಮತ್ತು ವಿ.ಅಬ್ದುರಹಿಮನ್ ಅನಾರೋಗ್ಯದ ಕಾರಣದಿಂದ ಗೈರು ಹಾಜರಾಗಿದ್ದರು. ಶಾಸಕ ಕನ್ನಮಂಗಲಮ್ ಹಂಗಾಮಿ ಸಭಾಧ್ಯಕ್ಷರ ಸ್ಥಾನದಲ್ಲಿ ಇದ್ದ ಕಾರಣ ಮತದಾನದಿಂದ ದೂರ ಉಳಿದಿದ್ದರು.
ರಾಜೇಶ್ ಅವರು ರಾಜ್ಯ ವಿಧಾನಸಭೆಗೆ ಪ್ರವೇಶ ಪಡೆಯುವ ಮೊದಲು 10 ವರ್ಷ ಸಂಸತ್ ಸದಸ್ಯರಾಗಿದ್ದರು. ಸಿಪಿಐ (ಎಂ) ರಾಜ್ಯ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.