News Kannada
Thursday, March 23 2023

ದೇಶ-ವಿದೇಶ

ಭಾರತ ತಂಡ ಸೇರಿಕೊಂಡ ಕರ್ನಾಟಕದ ವೇಗದ ಬೌಲರ್​ ಪ್ರಸಿಧ್ ಕೃಷ್ಣ

Photo Credit :

ದೆಹಲಿ : ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಕರ್ನಾಟಕದ ವೇಗದ ಬೌಲರ್​ ಪ್ರಸಿಧ್ ಕೃಷ್ಣ ಭಾರತ ತಂಡಕ್ಕೆ ಸೇರಿಕೊಂಡಿದ್ದಾರೆ ಎಂದು ಬಿಸಿಸಿಐ ಬುಧವಾರ ಖಚಿತಪಡಿಸಿದೆ. ಗುರುವಾರದಿಂದ ಭಾರತ ಮತ್ತು ಇಂಗ್ಲೆಂಡ್​ ನಡುವೆ 4ನೇ ಟೆಸ್ಟ್ ಪಂದ್ಯ ನಡೆಯಲಿದೆ. ಎರಡು ತಂಡಗಳು ತಲಾ ಒಂದು ಟೆಸ್ಟ್​ ಪಂದ್ಯ ಗೆದ್ದು 1-1ರಲ್ಲಿ ಸರಣಿ ಸಮಬಲ ಸಾಧಿಸಿವೆ.

ಟೀಮ್ ಮ್ಯಾನೇಜ್​ಮೆಂಟ್​ ಮನವಿ ಮೇರೆಗೆ ಭಾರತದ ಆಯ್ಕೆ ಸಮಿತಿ ವೇಗದ ಬೌಲರ್​ ಪ್ರಸಿಧ್ ಕೃಷ್ಣ ಅವರನ್ನು ನಾಲ್ಕನೇ ಟೆಸ್ಟ್​ ಪಂದ್ಯಕ್ಕೆ ಆಯ್ಕೆ ಮಾಡಲಾಗಿದೆ ಎಂದು ಬಿಸಿಸಿಐ ಹೇಳಿಕೆ ಬಿಡುಗಡೆ ಮಾಡಿದೆ.
ಪ್ರಸಿಧ್ ಹೆಚ್ಚುವರಿ ಬೌಲರ್​ ಆಗಿ ಟೀಮ್ ಇಂಡಿಯಾ ಜೊತೆ ಇಂಗ್ಲೆಂಡ್​ಗೆ ಪ್ರವಾಸ ಬೆಳೆಸಿದ್ದರು. ಇದೀಗ ನಾಲ್ಕನೇ ಟೆಸ್ಟ್​ಗೆ ಪದಾರ್ಪಣೆ ಮಾಡುವ ಸಾಧ್ಯತೆಯಿದೆ.

ಕೃಷ್ಣ ಮಾರ್ಚ್​ 23, 2021ರಲ್ಲಿ ಇಂಗ್ಲೆಂಡ್​ ವಿರುದ್ಧ ಏಕದಿನ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದರು. ಅವರು ಭಾರತದ ಪರ 3 ಏಕದಿನ ಪಂದ್ಯಗಳಿಂದ 6 ವಿಕೆಟ್ ಪಡೆದಿದ್ದಾರೆ. 9 ಪ್ರಥಮ ದರ್ಜೆ ಪಂದ್ಯಗಳಿಂದ 34 ವಿಕೆಟ್​ ಪಡೆದಿದ್ದಾರೆ.

See also  ಭಾರತ-ದಕ್ಷಿಣ ಆಫ್ರಿಕಾ ಟೆಸ್ಟ್: ಎರಡನೇ ದಿನದಾಟಕ್ಕೆ ಮಳೆ ಅಡ್ಡಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು