News Kannada
Wednesday, October 04 2023
ದೇಶ

ಕೇರಳದಲ್ಲಿ ಕೋವಿಡ್‌ ಪ್ರಕರಣ ಹೆಚ್ಚಳ: ₹ 267.35 ಕೋಟಿ ಘೋಷಣೆ

mansukh mandaviya 17082021
Photo Credit :

ತಿರುವನಂತಪುರಂ: ಕೇರಳದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚಾಗಿದ್ದು, ಈಗಿರುವ ಸ್ಥಿತಿಗತಿ ಪರಿಶೀಲನೆಗಾಗಿ ಇಂದು ಕೇಂದ್ರ ಆರೋಗ್ಯ ಸಚಿವ ಮನ್​ಸುಖ್​ ಮಾಂಡವಿಯಾ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್​, ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್​ ಸೇರಿ ತಿರುವನಂತಪುರದಲ್ಲಿ ಸಭೆ ನಡೆಸಿದ್ದಾರೆ.

ಸದ್ಯ ದಕ್ಷಿಣ ಭಾರತದ ರಾಜ್ಯಗಳಲ್ಲೇ ಅತ್ಯಂತ ಹೆಚ್ಚು ಕೊರೊನಾ ಕೇಸ್ ​ಗಳು ದಾಖಲಾಗುತ್ತಿರುವುದು ಕೇರಳದಲ್ಲಿ. ಇತ್ತೀಚೆಗೆ ಕೇಂದ್ರದಿಂದ ನುರಿತ ತಜ್ಞರ ತಂಡವೊಂದನ್ನು ಕೇರಳಕ್ಕೆ ಕಳಿಸಲಾಗಿತ್ತು. ಇಂದು ಬೆಳಗ್ಗೆ ಸ್ವತಃ ಕೇಂದ್ರ ಆರೋಗ್ಯ ಸಚಿವರೇ ಇಲ್ಲಿಗೆ ಆಗಮಿಸಿ, ಪರಿಸ್ಥಿತಿ ಪರಿಶೀಲನಾ ಸಭೆ ನಡೆಸಿದ್ದಾರೆ.

ತುರ್ತು ಕೊವಿಡ್​ ಪ್ರತಿಕ್ರಿಯಾ ಪ್ಯಾಕೇಜ್​-2ರ ಅಡಿ ಕೇರಳಕ್ಕೆ 267.35 ಕೋಟಿ ರೂಪಾಯಿಯನ್ನು ಕೇಂದ್ರ ಸರ್ಕಾರದಿಂದ ನೀಡಲಾಗುವುದು ಎಂದು ಸಭೆಯ ವೇಳೆ ಸಚಿವ ಮನ್​ಸುಖ್​ ಮಾಂಡವಿಯಾ ಘೋಷಿಸಿದ್ದಾರೆ.

ಕೇರಳದಲ್ಲಿ ಕೊರೊನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಆರೋಗ್ಯ ಕ್ಷೇತ್ರದ ಮೂಲಸೌಕರ್ಯಗಳನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಈ ಹಣ ಬಿಡುಗಡೆ ಮಾಡಲಾಗುತ್ತಿದೆ. ಇದರೊಂದಿಗೆ, ಕೇರಳದ ಎಲ್ಲ ಜಿಲ್ಲೆಗಳಲ್ಲಿ ಔಷಧಗಳ ಲಭ್ಯತೆ ಪ್ರಮಾಣ ಹೆಚ್ಚಿಸಲು ಹೆಚ್ಚುವರಿಯಾಗಿ ಒಂದು ಕೋಟಿ ಬಿಡುಗಡೆ ಮಾಡಲಾಗುವುದು ಎಂದೂ ಹೇಳಿದ್ದಾರೆ.

See also  ಹಳಿ ತಪ್ಪಿ ನದಿಗೆ ಉರುಳಿದ ಗೂಡ್ಸ್‌ ರೈಲಿನ ಆರು ಬೋಗಿಗಳು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು