ನವದೆಹಲಿ: ಇಂದು ಭಾರತ ರತ್ನ, ಜನಸಾಮಾನ್ಯರ ನೆಚ್ಚಿನ ರಾಷ್ಟ್ರಪತಿ, ಅಂತರಿಕ್ಷಯಾನ ಇಂಜಿನಿಯರ್, ವಿಜ್ಞಾನಿ, ಉಪನ್ಯಾಸಕ, ಯುವಕರ ಸ್ಫೂರ್ತಿ ಡಾ.ಎಪಿಜೆ ಅಬ್ದುಲ್ ಕಲಾಂ ಅವರ 90ನೇ ಜನ್ಮದಿನಾಚರಣೆಯಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಅಬ್ದುಲ್ ಕಲಾಂ ಅವರನ್ನು ಸ್ಮರಿಸಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ಭಾರತವನ್ನು ಬಲಿಷ್ಠ, ಸಮೃದ್ಧ ಮತ್ತು ಸಮರ್ಥವಾಗಿ ಕಟ್ಟಲು ಅಬ್ದುಲ್ ಕಲಾಂ ತಮ್ಮ ಜೀವನವನ್ನು ಅರ್ಪಿಸಿದರು. ಅವರು ದೇಶವಾಸಿಗಳಿಗೆ ಯಾವಾಗಲೂ ಸ್ಫೂರ್ತಿಯಾಗಿ ಉಳಿಯುತ್ತಾರೆ ಸ್ಮರಿಸಿದ್ದಾರೆ.
ರಾಷ್ಟ್ರಪತಿ ರಾಮನಾಥ ಕೋವಿಂದ್ ಗೌರವ:
ರಾಷ್ಟ್ರಪತಿ ರಾಮನಾಥ ಕೋವಿಂದ್ ಜಮ್ಮು ಮತ್ತು ಕಾಶ್ಮೀರ ಪ್ರವಾಸದಲ್ಲಿದ್ದು, ಉಧಂಪುರದಲ್ಲಿ ಕಲಾಂ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.