News Kannada
Friday, March 24 2023

ದೇಶ

ಮಾಜಿ ಸಿಎಂ ಕಲ್ಯಾಣ್ ಸಿಂಗ್ ನಿಧನಕ್ಕೆ ಗಣ್ಯರ ಕಂಬನಿ

Photo Credit :

ನವದೆಹಲಿ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಗೃಹ ಸಚಿವ ಅಮಿತ್‌ ಶಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವರು ಗಣ್ಯರು ಕಂಬನಿ ಮಿಡಿದಿದ್ದಾರೆ.

‘ನಾನು ಪದಗಳನ್ನು ಮೀರಿ ದುಃಖಿತನಾಗಿದ್ದೇನೆ. ಕಲ್ಯಾಣ್ ಸಿಂಗ್ ಜಿ … ರಾಜನೀತಿಜ್ಞ, ಹಿರಿಯ ಆಡಳಿತಗಾರ, ತಳಮಟ್ಟದ ನಾಯಕ ಮತ್ತು ಮಹಾನ್ ಮಾನವ. ಉತ್ತರ ಪ್ರದೇಶದ ಅಭಿವೃದ್ಧಿಗೆ ಅವರು ಅಳಿಸಲಾಗದ ಕೊಡುಗೆಯನ್ನು ಬಿಟ್ಟು ಹೋಗುತ್ತಾರೆ. ಅವರ ಪುತ್ರ ರಾಜವೀರ್ ಸಿಂಗ್ ಅವರನ್ನು ಮಾತನಾಡಿಸಿ ಸಾಂತ್ವನ ಹೇಳಿರುವೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

‘ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ನಿಧನದಿಂದ ಅತೀವ ನೋವಾಗಿದೆ. ಅವರು ರಾಷ್ಟ್ರೀಯವಾದಿ ಮತ್ತು ಅನುಕರಣೀಯ ನಾಯಕನಾಗಿದ್ದು, ಜನರ ಸೇವೆಗೆ ಬದ್ಧವಾಗಿದ್ದರು. ಅವರ ಅನುಯಾಯಿಗಳು ಮತ್ತು ಕುಟುಂಬದ ಜೊತೆ ನಾನಿದ್ದೇನೆ’ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಹೇಳಿದ್ದಾರೆ.

‘ಕಲ್ಯಾಣ್ ಸಿಂಗ್ ಅವರ ನಿಧನದಿಂದ ನಾನು ಸೇರಿದಂತೆ ದೇಶಾದ್ಯಂತ ಕೋಟ್ಯಂತರ ಜನರಿಗೆ ನೋವಾಗಿದೆ. ಅವರು ಹಿರಿಯ ಬಿಜೆಪಿ ನಾಯಕ ಮತ್ತು ರಾಮಜನ್ಮಭೂಮಿ ಚಳವಳಿಯ ಹೀರೊ. ಹಿಂದುಳಿದ ಸಮುದಾಯಗಳ ಹಕ್ಕುಗಳಿಗಾಗಿ ಹಲವು ವರ್ಷಗಳ ಕಾಲ ಹೋರಾಡಿದ್ದರು’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

‘ಕಲ್ಯಾಣ್ ಸಿಂಗ್ ನಿಧನಕ್ಕೆ ಉತ್ತರ ಪ್ರದೇಶದಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಅವರ ಅಂತಿಮ ಸಂಸ್ಕಾರವನ್ನು ಆಗಸ್ಟ್ 23ರ ಸಂಜೆ ನರೋರಾದ ಗಂಗಾ ತೀರದಲ್ಲಿ ನೆರವೇರಿಸಲಾಗುತ್ತದೆ. ಆಗಸ್ಟ್ 23 ರಂದು ಸಾರ್ವಜನಿಕ ರಜೆ ಘೋಷಿಸಲಾಗಿದೆ’ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಅಲ್ಲದೆ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

See also  ಅನೈತಿಕ ಚಟುವಟಿಕೆ, ವಿದ್ಯಾರ್ಥಿ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

149

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು