News Kannada
Wednesday, March 22 2023

ಆಂಧ್ರಪ್ರದೇಶ

ವಿಜಯವಾಡ: ನದಿಗೆ ಹಾರಿದ ವ್ಯಕ್ತಿಯನ್ನು ರಕ್ಷಿಸಿದ ಎಸ್ ಡಿಆರ್ ಎಫ್ ತಂಡ

Andhra Pradesh SDRF team rescues man who jumped into river
Photo Credit : IANS

ವಿಜಯವಾಡ: ಆತ್ಮಹತ್ಯೆ ಮಾಡಿಕೊಳ್ಳಲು ಕೃಷ್ಣಾ ನದಿಗೆ ಹಾರಿದ ವ್ಯಕ್ತಿಯನ್ನು ಆಂಧ್ರಪ್ರದೇಶ ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ ಡಿಆರ್ ಎಫ್) ರಕ್ಷಿಸಿದೆ.

ಇಲ್ಲಿನ ಪ್ರಕಾಶಂ ಬ್ಯಾರೇಜ್ ಬಳಿ ನದಿಗೆ ಹಾರಿದ ಆಟೋರಿಕ್ಷಾ ಚಾಲಕನನ್ನು ಎಸ್ ಡಿಆರ್ ಎಫ್ ತಂಡ ರಕ್ಷಿಸಿದೆ. ಗುಂಟೂರು ಜಿಲ್ಲೆಯ ಮಂಗಳಗಿರಿಯ ವ್ಯಕ್ತಿ ಕೌಟುಂಬಿಕ ಕಲಹದಿಂದಾಗಿ ಈ ಕೃತ್ಯ ಎಸಗಿದ್ದಾನೆ.

ಘಟನೆಯ ಬಗ್ಗೆ ತಿಳಿದು ಮಂಗಳಗಿರಿಯ ಆರನೇ ಬೆಟಾಲಿಯನ್ ನ ಎಸ್ ಡಿಆರ್ ಎಫ್ ತಂಡವು ಸ್ಥಳಕ್ಕೆ ಧಾವಿಸಿ ಆತನನ್ನು ರಕ್ಷಿಸಿತು. ನಂತರ ಎಸ್ ಡಿಆರ್ ಎಫ್ ತಂಡವು ಅವರನ್ನು ಚಿಕಿತ್ಸೆ ಮತ್ತು ಸಮಾಲೋಚನೆಗಾಗಿ ವಿಜಯವಾಡ ನಗರ ಪೊಲೀಸರ ಐ-ಟೌನ್ ಪೊಲೀಸ್ ಠಾಣೆಗೆ ಹಸ್ತಾಂತರಿಸಿತು.

ಪೊಲೀಸ್ ಮಹಾನಿರ್ದೇಶಕ ಕೆ.ವಿ.ರಾಜೇಂದ್ರನಾಥ್ ರೆಡ್ಡಿ ಅವರು ಎಸ್ ಡಿಆರ್ ಎಫ್ ತಂಡದ ಸದಸ್ಯರ ಸಮಯೋಚಿತ ಪ್ರತಿಕ್ರಿಯೆ ಮತ್ತು ರಕ್ಷಣಾ ಪ್ರಯತ್ನಗಳನ್ನು ಶ್ಲಾಘಿಸಿದರು.

ಸಹಾಯವಾಣಿಗೆ ಕರೆ ಮಾಡಿ:

ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು

See also  ತಿರುಪತಿ: ಆಸ್ಪತ್ರೆಯಲ್ಲಿ ಬೆಂಕಿ ಅವಘಡ, ವೈದ್ಯ ಇಬ್ಬರು ಮಕ್ಕಳ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

30409

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು