ಅಮರಾವತಿ: ಆಂಧ್ರಪ್ರದೇಶದಲ್ಲಿ ಹೂಡಿಕೆ ಮಾಡಲು ಉದ್ಯಮಿಗಳಿಗೆ ವಿಶ್ವಾಸವಿಲ್ಲ ಎಂದು ತೆಲುಗು ದೇಶಂ ಪಕ್ಷದ (ಟಿಡಿಪಿ) ರಾಷ್ಟ್ರೀಯ ಅಧ್ಯಕ್ಷ ಎನ್.ಚಂದ್ರಬಾಬು ನಾಯ್ಡು ಶನಿವಾರ ಆರೋಪಿಸಿದ್ದಾರೆ.
ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಆಡಳಿತದಲ್ಲಿ ವಿದೇಶಿ ನೇರ ಹೂಡಿಕೆ (ಎಫ್ಡಿಐ) ಹರಿವಿನಲ್ಲಿ ರಾಜ್ಯಗಳ ಪೈಕಿ ಆಂಧ್ರಪ್ರದೇಶ 14 ನೇ ಸ್ಥಾನಕ್ಕೆ ಕುಸಿದಿದೆ ಎಂದು ಹೇಳಿದ್ದಾರೆ. ಎಫ್ಡಿಐಗಳನ್ನು ಆಕರ್ಷಿಸುವ ಟಾಪ್ 5 ಭಾರತೀಯ ರಾಜ್ಯಗಳಲ್ಲಿ ಒಂದಾಗಿದ್ದ ಆಂಧ್ರಪ್ರದೇಶವು ಈಗ ಪಟ್ಟಿಯ ಕೆಳಭಾಗಕ್ಕೆ ಇಳಿದಿದೆ ಮತ್ತು 14 ನೇ ಸ್ಥಾನದಲ್ಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ.
ಭಾರತದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ತಮ್ಮ ಸ್ವಂತ ಸಂಪತ್ತಿನ ಬಗ್ಗೆ ಮಾತ್ರ ಕಾಳಜಿಹೊಂದಿದ್ದಾರೆ ಎಂದು ತಿಳಿಸಿದ್ದಾರೆ.
ಉದ್ಯೋಗ ಸೃಷ್ಟಿ ಕುರಿತು ಅವರು ಕಾಳಜಿ ವಹಿಸುವುದಿಲ್ಲ ಎಂದಿದ್ದಾರೆ. ಈ ವರ್ಷದ ಮಾರ್ಚ್ನಲ್ಲಿ ಸಂಸತ್ತಿನಲ್ಲಿ ಕೇಂದ್ರವು ಹಂಚಿಕೊಂಡ ಮಾಹಿತಿಯ ಪ್ರಕಾರ, ಆಂಧ್ರ ಪ್ರದೇಶವು ಅಕ್ಟೋಬರ್ 2019 ಮತ್ತು ಮಾರ್ಚ್ 2022 ರ ನಡುವೆ $ 511.7 ಮಿಲಿಯನ್ ಎಫ್ಡಿಐ ಅನ್ನು ಆಕರ್ಷಿಸಿದೆ. ಎಫ್ಡಿಐ ಇಕ್ವಿಟಿ ಒಳಹರಿವಿನಲ್ಲಿ ಮಹಾರಾಷ್ಟ್ರ, ಕರ್ನಾಟಕ ಮತ್ತು ಗುಜರಾತ್ ಮೊದಲ ಮೂರು ಸ್ಥಾನಗಳನ್ನು ಪಡೆದಿವೆ.