News Karnataka Kannada
Thursday, April 25 2024
ಆಂಧ್ರಪ್ರದೇಶ

ಆಂಧ್ರಪ್ರದೇಶದಲ್ಲಿ ಮೀನಿನ ಲಾರಿ ಅಪಘಾತ: ಉಚ್ಚಿಲ ಭಾಸ್ಕರನಗರದ ನಿವಾಸಿ ದುರ್ಮರಣ

Andhra Pradesh: Fish lorry accident: Resident of Uchila Bhaskaranagar dies
Photo Credit : News Kannada

ಆಂಧ್ರಪ್ರದೇಶ: ನಂಬೂರು ಎಂಬಲ್ಲಿ ನಡೆದ ಅಪಘಾತವೊಂದರಲ್ಲಿ ಉಚ್ಚಿಲ ಭಾಸ್ಕರನಗರದ ನಿವಾಸಿ ಬಷೀರ್ ಎಂಬವರು ಸಾವಿಗೀಡಾದ ಘಟನೆ ಇಂದು ನಡೆದಿದೆ.

ಮೀನಿನ ಲಾರಿಯಲ್ಲಿ ಚಾಲಕನಾಗಿದ್ದ ಬಷೀರ್, ಗುರುವಾರ ಆಂಧ್ರಪ್ರದೇಶದ ನಂಬೂರು-ಕಝ ರಸ್ತೆಯಲ್ಲಿ ಸಾಗುತಿದ್ದ ವೇಳೆ ನಿಯಂತ್ರಣ ತಪ್ಪಿ ಲಾರಿಯೊಂದಕ್ಕೆ ಡಿಕ್ಕಿ ಹೊಡಿದಿದೆ. ಈ ಭೀಕರ ಅಪಘಾತದಲ್ಲಿ ಬಷೀರ್ ಸಾವಿಗೀಡಾಗಿದ್ದಾರೆ. ಜೊತೆಗೆ ಡಿಕ್ಕಿಯಾದ ಲಾರಿಯ ಚಾಲಕ ಕೂಡ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಗೋವಾ ಮೂಲದ ಮೀನಿನ ಲಾರಿಯಲ್ಲಿ ಚಾಲಕನಾಗಿರುವ ಬಷೀರ್, ಓರ್ವ ಉತ್ತಮ ಕ್ರಿಕೆಟಿಗನಾಗಿಯೂ ಹೆಸರುಗಳಿಸಿದ್ದರು. ಮೀನು ಸಾಗಾಟಕ್ಕಾಗಿ ಮಂಗಳವಾರ ಚೆನ್ನೈಗೆ ತೆರಳಿದ್ದ ಬಷೀರ್, ಅಲ್ಲಿ ಲಾರಿಯಲ್ಲಿ ಮೀನು ತುಂಬಿಸಿಕೊಂಡು ಒಡಿಶಾಕ್ಕೆ ತೆರಳುತ್ತಿದ್ದರು. ಆಂಧ್ರಪ್ರದೇಶದ ನಂಬೂರು-ಕಝ ರಸ್ತೆಯಲ್ಲಿ ಸಾಗುತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಉಚ್ಚಿಲ ಭಾಸ್ಕರನಗರದ ಶಾಬುದ್ದೀನ್- ನಬಿಸಾ ಪುತ್ರನಾಗಿರುವ ಬಷೀರ್, ಬೆಳಪುವಿನಲ್ಲಿ ಮನೆಮಾಡಿಕೊಂಡಿದ್ದರು. ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದು, ಅವರ ಮೃತದೇಹವನ್ನು ಹುಟ್ಟೂರು ಉಚ್ಚಿಲಕ್ಕೆ ತರಲು ಅವರ ಸಹೋದರರು ಹಾಗು ಗೆಳೆಯರು ಆಂಧ್ರಪ್ರದೇಶಕ್ಕೆ ಹೊರಟಿದ್ದಾರೆ. ಮೃತದೇಹ ತರಲು ಒಂದೆರೆಡು ದಿನ ಬೇಕಾಗಿದ್ದು, ಅವರ ಅಗಲಿಕೆಯಿಂದ ಮನೆಯಲ್ಲಿ ಆಕ್ರಂದನ ಮುಗಿಲುಮುಟ್ಟಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು