News Kannada
Monday, December 11 2023
ಆಂಧ್ರಪ್ರದೇಶ

ಜೈಲಿನಲ್ಲಿಯೇ ಚಂದ್ರಬಾಬು ನಾಯ್ಡು ಉಪವಾಸ ಸತ್ಯಾಗ್ರಹ

Chandrababu Naidu goes on hunger strike in jail
Photo Credit : News Kannada

ಆಂಧ್ರಪ್ರದೇಶ: ಎಪಿ ಸ್ಕಿಲ್ ಡೆವಲಪ್‌ಮೆಂಟ್ ಹಗರಣ ಪ್ರಕರಣದಲ್ಲಿ ಬಂಧಿತರಾಗಿರುವ ಚಂದ್ರಬಾಬು ನಾಯ್ಡು ರಾಜಮಂಡ್ರಿ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದಾರೆ. ಇಂದು ಗಾಂಧಿ ಜಯಂತಿಯಂದು ಟಿಡಿಪಿ ನಾಯಕರು ಬಂಧನದ ವಿರುದ್ಧ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಇದರಲ್ಲಿ ಚಂದ್ರಬಾಬು ನಾಯ್ಡು, ನಾರಾ ಭುವನೇಶ್ವರಿ, ಲೋಕೇಶ್ ಸೇರಿದಂತೆ ಎಲ್ಲರೂ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳಲಿದ್ದಾರೆ. ಚಂದ್ರಬಾಬು ಜೈಲಿನಲ್ಲಿಯೇ ಒಂದು ದಿನ ಸತ್ಯಾಗ್ರಹ ಆರಂಭಿಸಲಿದ್ದಾರೆ. ಸತ್ಯಮೇವ ಜಯತೆ ಹೆಸರಿನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಬೆಳಗ್ಗೆ 10ರಿಂದ ಸಂಜೆ 5ರವರೆಗೆ ರಾಜಮಹೇಂದ್ರವರಂ ಕ್ವಾರಿ ಮಾರುಕಟ್ಟೆ ಪ್ರದೇಶದಲ್ಲಿ ನಿರ್ಮಿಸಿರುವ ಆವರಣದಲ್ಲಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಎಪಿ ಸ್ಕಿಲ್ ಡೆವಲಪ್‌ಮೆಂಟ್ ಕೇಸ್‌ ಗೆ ಸಂಬಂಧಿಸಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ ಐ ಆರ್‌ ಅನ್ನು ರದ್ದುಗೊಳಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಆಂಧ್ರಪ್ರದೇಶ ಹೈ ಕೋರ್ಟ್‌ ವಜಾಗೊಳಿಸಿರುವುದನ್ನು ಪ್ರಶ್ನಿಸಿ ತೆಲುಗುದೇಶಂ ಪಕ್ಷದ ಮುಖ್ಯಸ್ಥ ಎನ್‌. ಚಂದ್ರಬಾಬು ನಾಯ್ಡು ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ಇದೇ ಅ.೩ರಂದು ಕೋರ್ಟ್‌ ನಲ್ಲಿ ನಡೆಯಲಿದೆ.

See also  ಆಂಧ್ರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ವೈದ್ಯಕೀಯ ವಿದ್ಯಾರ್ಥಿಗಳ ದುರ್ಮರಣ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು