News Kannada
Saturday, April 01 2023

ಬಿಹಾರ

ಮೇವು ಹಗರಣ ಪ್ರಕರಣ : ಲಾಲು ಪ್ರಸಾದ್‌ಗೆ 5 ವರ್ಷ ಜೈಲು, ₹60 ಲಕ್ಷ ದಂಡ

Photo Credit : News Kannada

ಪಾಟ್ನಾ: ಮೇವು ಹಗರಣದಲ್ಲಿ ಲಾಲು ಪ್ರಸಾದ್‌ಗೆ 5 ವರ್ಷ ಜೈಲು, ₹60 ಲಕ್ಷ ದಂಡ ವಿಧಿಸಲಾಗಿದೆ ಎಂದು ತಿಳಿದು ಬಂದಿದೆ.ಪ್ರಕರಣದ ಮೂಲ 170 ಆರೋಪಿಗಳಲ್ಲಿ 55 ಮಂದಿ ಸಾವನ್ನಪ್ಪಿದ್ದಾರೆ, ಏಳು ಮಂದಿ ಸರ್ಕಾರಿ ಸಾಕ್ಷಿಯಾಗಿದ್ದಾರೆ, ಇಬ್ಬರು ತಮ್ಮ ವಿರುದ್ಧದ ಆರೋಪಗಳನ್ನು ಒಪ್ಪಿಕೊಂಡಿದ್ದಾರೆ ಮತ್ತು ಆರು ಮಂದಿ ತಲೆಮರೆಸಿಕೊಂಡಿದ್ದಾರೆ.

ಪ್ರಸಾದ್ ಸೇರಿದಂತೆ 99 ಆರೋಪಿಗಳ ವಿರುದ್ಧ ವಿಶೇಷ ಸಿಬಿಐ (ಕೇಂದ್ರ ತನಿಖಾ ದಳ) ನ್ಯಾಯಾಧೀಶ ಎಸ್ ಕೆ ಶಶಿ ಅವರು ಕಳೆದ ವರ್ಷ ಫೆಬ್ರವರಿಯಿಂದ ವಿಚಾರಣೆಯನ್ನು ಪೂರ್ಣಗೊಳಿಸಿದ್ದರು.ಕೊನೆಯ ಆರೋಪಿ ಡಾ.ಶೈಲೇಂದ್ರ ಕುಮಾರ್ ಪರ ವಾದ ಮಂಡನೆ ಜನವರಿ 29ರಂದು ಪೂರ್ಣಗೊಂಡಿತ್ತು.

ಲಾಲ್‌ ಪ್ರಸಾದ್ ಅವರಲ್ಲದೆ, ಮಾಜಿ ಸಂಸದ ಜಗದೀಶ್ ಶರ್ಮಾ, ಅಂದಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿ (ಪಿಎಸಿ) ಅಧ್ಯಕ್ಷ ಧ್ರುವ ಭಗತ್, ಪಶುಸಂಗೋಪನಾ ಕಾರ್ಯದರ್ಶಿ ಬೆಕ್ ಜೂಲಿಯಸ್ ಮತ್ತು ಪಶುಸಂಗೋಪನಾ ಸಹಾಯಕ ನಿರ್ದೇಶಕ ಡಾ.ಕೆ.ಎಂ.ಪ್ರಸಾದ್ ಪ್ರಮುಖ ಆರೋಪಿಗಳಾಗಿದ್ದಾರೆ. ₹950 ಕೋಟಿ ಮೇವು ಹಗರಣವು ಅವಿಭಜಿತ ಬಿಹಾರದ ವಿವಿಧ ಜಿಲ್ಲೆಗಳಲ್ಲಿನ ಸರ್ಕಾರಿ ಖಜಾನೆಗಳಿಂದ ಸಾರ್ವಜನಿಕ ಹಣವನ್ನು ವಂಚನೆಯಿಂದ ಹಿಂತೆಗೆದುಕೊಳ್ಳುವುದಕ್ಕೆ ಸಂಬಂಧಿಸಿದೆ. ಡಿಸೆಂಬರ್ 2013 ರಲ್ಲಿ, ಸುಪ್ರೀಂ ಕೋರ್ಟ್ ಈ ಪ್ರಕರಣದಲ್ಲಿ ಪ್ರಸಾದ್‌ಗೆ ಜಾಮೀನು ನೀಡಿತು ಮತ್ತು ಡಿಸೆಂಬರ್ 2017 ರಲ್ಲಿ ಸಿಬಿಐ ನ್ಯಾಯಾಲಯವು ಅವರನ್ನು ಮತ್ತು ಇತರ 15 ಜನರನ್ನು ತಪ್ಪಿತಸ್ಥರೆಂದು ಘೋಷಿಸಿ ಬಿರ್ಸಾ ಮುಂಡಾ ಜೈಲಿಗೆ ಕಳುಹಿಸಿತು. ಜಾರ್ಖಂಡ್ ಹೈಕೋರ್ಟ್ ಏಪ್ರಿಲ್ 2021 ರಲ್ಲಿ ಪ್ರಸಾದ್ ಅವರಿಗೆ ಜಾಮೀನು ನೀಡಿತು.

See also  ಬಹುಕೋಟಿ ಮೇವು ಹಗರಣದಲ್ಲಿ ಲಾಲು ದೋಷಿ: ಫೆ.21ರಂದು ಶಿಕ್ಷೆ ​ಪ್ರಕಟ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12795
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು