ಪಾಟ್ನಾ: ಟಿಪ್ಪು ಸುಲ್ತಾನ್ ಸಮಾಧಿಗೆ ಪ್ರಾರ್ಥನೆ ಸಲ್ಲಿಸಿದ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯನ್ನು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಸೋಮವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಮುಫ್ತಿ ಅವರು ಭಾನುವಾರ ಕರ್ನಾಟಕದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಸಮಾಧಿಗೆ ಭೇಟಿ ನೀಡಿ ಟಿಪ್ಪು ಸುಲ್ತಾನ್ ಸಮಾಧಿಗೆ ಪ್ರಾರ್ಥನೆ ಸಲ್ಲಿಸಿದ್ದರು.
ಸಿದ್ದರಾಮಯ್ಯನವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ಮುಫ್ತಿ ಬೆಂಗಳೂರಿಗೆ ಬಂದಿದ್ದ ಮುಫ್ತಿ ಕಾರ್ಯಕ್ರಮದ ನಂತರ, ಅವರು ಸಮಾಧಿಗೆ ಹೋಗಿ ಪ್ರಾರ್ಥನೆ ಸಲ್ಲಿಸಿದರು.
ಈ ವಿಚಾರದ ಕುರಿತು ಕೆಂಡಾಮಂಡಲರಾಗಿರುವ ಕೇಂದ್ರ ಸಚಿವ ಸಿಂಗ್ ಮೆಹಬೂಬಾ ಮುಫ್ತಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಹರಡುತ್ತಿದ್ದಾರೆ. ಇದು ಸಾಲದೆಂಬಂತೆ ಅವರು ಈಗ ಕರ್ನಾಟದಲ್ಲಿ ಆಕ್ರಮಣ, ಅನ್ಯಾಯಕ್ಕೆ ಕುಖ್ಯಾತಿ ಪಡೆದಿದ್ದ ಟಿಪ್ಪು ಸಮಾಧಿ ನಮಿಸಿದ್ದಾರೆ. ಟಿಪ್ಪು ಸುಲ್ತಾನ್ ಬ್ರಿಟಿಷ್ ಆಡಳಿತಗಾರರ ವಿರುದ್ಧ ಹೋರಾಡಲಿಲ್ಲ. ಅವನು ದೇಶವನ್ನು ದೋಚಲು ಭಾರತಕ್ಕೆ ಬಂದನು. ಲೂಟಿ ಮಾಡಿದ ನಂತರ ಇಲ್ಲಿ ಆಳ್ವಿಕೆ ನಡೆಸಿದ ಎಂದು ಹೇಳಿದ್ದಾರೆ. ಅದರಂತೆ ಮೆಹಬೂಬಾ ಮುಫ್ತಿ ಕೂಡ ಆಕ್ರಮಣಕಾರಿ ಸ್ವಭಾವ ಹೊಂದಿದ್ದಾರೆ ಎಂದು ತಿಳಿಸಿದ್ದಾರೆ.