News Karnataka Kannada
Thursday, April 25 2024
Cricket
ಬಿಹಾರ

ಪಾಟ್ನಾದಲ್ಲಿ ತಾತ್ಕಾಲಿಕ ತಡೆಗೋಡೆಗೆ ಪಿಕ್ ಅಪ್ ಡಿಕ್ಕಿ, ಇಬ್ಬರು ಸಾವು

Bike rider killed in road accident between lorry and bike
Photo Credit : IANS

ಪಾಟ್ನಾ, ಮೇ.19: ಪಿಕ್ ಅಪ್ ತಾತ್ಕಾಲಿಕ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಪಾಟ್ನಾದ ಹೊರವಲಯದ ಬಿಹ್ತಾ ಗ್ರಾಮದಲ್ಲಿ ನಡೆದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಪಿಕ್ ಅಪ್ ವ್ಯಾನ್ ನಲ್ಲಿದ್ದವರು ಗುರುವಾರ ತಡರಾತ್ರಿ ಮದುವೆ ಸಮಾರಂಭದ ನಂತರ ಬಿಹ್ತಾದಿಂದ ಹಿಂದಿರುಗುತ್ತಿದ್ದರು. ಘಟನೆಯಲ್ಲಿ ವಧುವಿನ 15 ವರ್ಷದ ಸಹೋದರ ಸಹ ಪ್ರಾಣ ಕಳೆದುಕೊಂಡಿದ್ದಾನೆ.

ಬಿಹ್ತಾ ಪೊಲೀಸ್ ಠಾಣೆ ವ್ಯಾಪ್ತಿಯ ಪಥೋಲಿಯಾ ಒಡ್ಡಿನಲ್ಲಿ ಅಪಘಾತ ಸಂಭವಿಸಿದೆ ಎಂದು ಎಸ್ಎಚ್ಒ ಪ್ರಮೋದ್ ಕುಮಾರ್ ತಿಳಿಸಿದ್ದಾರೆ. ತಿಲಕ ಸಮಾರಂಭದ ನಂತರ ಜನರು ಮನೆಗೆ ಹಿಂದಿರುಗುತ್ತಿದ್ದಾಗ ವಾಹನದ ಚಾಲಕ ನಿಯಂತ್ರಣ ಕಳೆದುಕೊಂಡು ತಾತ್ಕಾಲಿಕ ತಡೆಗೋಡೆಗೆ ಡಿಕ್ಕಿ ಹೊಡೆದಿದ್ದಾನೆ.

“ಕೆಲವು ಜನರು ವ್ಯಾನ್ ನ ಮೇಲ್ಛಾವಣಿಯ ಮೇಲೆ ಕುಳಿತಿದ್ದರು. ವಾಹನವು ತಡೆಗೋಡೆಗೆ ಡಿಕ್ಕಿ ಹೊಡೆದಾಗ, ಅವರು ಕೆಳಗೆ ಬಿದ್ದರು” ಎಂದು ಕುಮಾರ್ ಹೇಳಿದರು.

“ವಾಹನದ ಚಾಲಕ ಸ್ಥಳದಿಂದ ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದಾನೆ. ಆತನನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ” ಎಂದು ಅವರು ಹೇಳಿದರು.

“ಮಾಹಿತಿ ಪಡೆದ ತಂಡವು ತಕ್ಷಣ ಸ್ಥಳಕ್ಕೆ ಧಾವಿಸಿ ಅವರನ್ನು ರಕ್ಷಿಸಿತು. ವಿವೇಕ್ ಕುಮಾರ್ (40) ಸ್ಥಳದಲ್ಲೇ ಮೃತಪಟ್ಟರೆ, ನಟಕ್ ಮಹತೋ (40) ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೂವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ ಎಂದು ಕುಮಾರ್ ತಿಳಿಸಿದ್ದಾರೆ.

ಮೃತರು ಸರನ್ ಜಿಲ್ಲೆಯ ಡೋರಿಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ದಯಾಳ್ಚಕ್ ಗ್ರಾಮದವರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು