News Karnataka Kannada
Saturday, April 20 2024
Cricket
ದೆಹಲಿ

ಪ್ರಜಾಪ್ರಭುತ್ವದ ಎಲ್ಲಾ ಸ್ತಂಭಗಳು ‘ದುರ್ಬಲಗೊಳ್ಳುತ್ತಿರುವ’ ಈ ಸಮಯದಲ್ಲಿ, ಪಟೇಲರ ಕೊಡುಗೆ ನೆನಪಿಸಿಕೊಳ್ಳುವುದು ಮುಖ್ಯ : ರಾಹುಲ್ ಗಾಂಧಿ

Rahul Gandhi
Photo Credit :

ನವದೆಹಲಿ : ಭಾರತದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ಕಾಂಗ್ರೆಸ್ ಭಾನುವಾರ ಶ್ರದ್ಧಾಂಜಲಿ ಸಲ್ಲಿಸಿದೆ. ಕಾಂಗ್ರೆಸ್‌ ಮುಖಂಡ ರಾಹುಲ್ ಗಾಂಧಿ ಅವರು, ಪ್ರಜಾಪ್ರಭುತ್ವದ ಎಲ್ಲಾ ಸ್ತಂಭಗಳು ‘ದುರ್ಬಲಗೊಳ್ಳುತ್ತಿರುವ’ ಈ ಸಮಯದಲ್ಲಿ, ಪಟೇಲರ ಕೊಡುಗೆಯನ್ನು ನೆನಪಿಸಿಕೊಳ್ಳುವುದು ಬಹಳ ಮುಖ್ಯ ಎಂದು ಹೇಳಿದ್ದಾರೆ.

‘ನಮ್ಮ ಪ್ರಜಾಪ್ರಭುತ್ವದ ಎಲ್ಲಾ ಆಧಾರ ಸ್ತಂಭಗಳು ದುರ್ಬಲಗೊಂಡಿರುವಾಗ, ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರಮುಖ ಕೊಡುಗೆಯನ್ನು ನಾವು ನೆನಪಿಸಿಕೊಳ್ಳಬೇಕು. ಈ ಸ್ತಂಭಗಳನ್ನು ನಿರ್ಮಿಸಿದ ಕಾಂಗ್ರೆಸ್ ನಾಯಕರ ಪೈಕಿ ಪಟೇಲರು ಪ್ರಮುಖ ಧ್ವನಿಯಾಗಿದ್ದರು. ಪ್ರಜಾಪ್ರಭುತ್ವವನ್ನು ರಕ್ಷಿಸುವುದೇ ಸರ್ದಾರ್ ಪಟೇಲ್ ಅವರಿಗೆ ಸಲ್ಲಿಸುವ ನಿಜವಾದ ಗೌರವ’ ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಪಟೇಲ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ರೈತರಿಗೆ ಅವರು ನೀಡಿದ ಕೊಡುಗೆಯನ್ನು ಸ್ಮರಿಸಿದ ಅವರು, ಅವರ ಹೋರಾಟವು ‘ರೈತರ ಮೇಲಿನ ದಬ್ಬಾಳಿಕೆಯ ವಿರುದ್ಧ ನ್ಯಾಯಕ್ಕಾಗಿ ನಡೆಯುವ ಹೋರಾಟದಲ್ಲಿ ಬಂಡೆಯಂತೆ ನಿಲ್ಲಲು ನಮಗೆ ಸ್ಫೂರ್ತಿ ನೀಡುತ್ತದೆ’ ಎಂದು ಹೇಳಿದರು.

‘ಉಕ್ಕಿನ ಮನುಷ್ಯ’ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಬಾರ್ಡೋಲಿ ಸತ್ಯಾಗ್ರಹದಲ್ಲಿ ರೈತರ ಹಕ್ಕುಗಳು ಮತ್ತು ಸ್ವಾಭಿಮಾನಕ್ಕಾಗಿ ಧ್ವನಿ ಎತ್ತಿದ್ದರು. ಅವರ ಹೋರಾಟವು ರೈತರ ನ್ಯಾಯಕ್ಕಾಗಿ ಮತ್ತು ಅವರ ಹಕ್ಕುಗಳ ಹೋರಾಟದಲ್ಲಿ ಬಂಡೆಯಂತೆ ನಿಲ್ಲಲು ನಮಗೆ ಸ್ಫೂರ್ತಿ ನೀಡುತ್ತದೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದರು.

‘ಭಾರತವನ್ನು ಒಗ್ಗೂಡಿಸುವ ಈ ಹೋರಾಟದಲ್ಲಿ; ದ್ವೇಷದ ವಿರುದ್ಧ ಪ್ರೀತಿಗೆ ಜಯವನ್ನು ಖಚಿತಪಡಿಸುವ ಈ ಹೋರಾಟದಲ್ಲಿ; ನಮ್ಮ ರೈತರು, ನಮ್ಮ ಜನರು, ನಮ್ಮ ರಾಷ್ಟ್ರವನ್ನು ರಕ್ಷಿಸುವ ಈ ಹೋರಾಟದಲ್ಲಿ ನಾವು ಇಂದು ಮತ್ತು ಪ್ರತಿದಿನ ಭಾರತ ರತ್ನ ಸರ್ದಾರ್ ವಲ್ಲಭಭಾಯಿ ಅವರನ್ನು ಸ್ಮರಿಸುತ್ತೇವೆ’ ಎಂದು ಕಾಂಗ್ರೆಸ್ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹೇಳಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು