News Kannada
Friday, September 29 2023
ದೆಹಲಿ

10 ಕಿ.ಮೀ​ ಓಡುತ್ತಲೇ ಮನೆ ಸೇರುವ ಪ್ರದೀಪ್ ಮೆಹ್ರಾಗೆ ಸಿಹಿ ಸುದ್ದಿಕೊಟ್ಟ ದೆಹಲಿ ಸರಕಾರ

run
Photo Credit :

ಕೆಲಸ ಮುಗಿಸಿ ಮಧ್ಯರಾತ್ರಿ 10 ಕಿಲೋ ಮೀಟರ್​ ಓಡುತ್ತಲೇ ಮನೆ ಸೇರುವ 19 ವರ್ಷದ ಯುವಕ ಪ್ರದೀಪ್ ಮೆಹ್ರಾನ ವಿಡಿಯೋ ಇತ್ತೀಚೆಗೆ ಸಿಕ್ಕಾಪಟ್ಟೆ ವೈರಲ್​ ಆಗಿತ್ತು. ಎಲ್ಲೆಡೆ ಆತನ ಕನಸಿನ ಓಟಕ್ಕೆ ಬೆಂಬಲ ಸೂಚಿಸಿದ್ದಾರೆ.

ಇದೀಗ ಅನಾರೋಗ್ಯದಿಂದ ಬಳಲುತ್ತಿರುವ ಪ್ರದೀಪ್​ ಮೆಹ್ರಾ ತಾಯಿಗೆ ದೆಹಲಿ ಸರ್ಕಾರ ಉಚಿತವಾಗಿ ಚಿಕಿತ್ಸೆ ನೀಡುವುದಾಗಿ ಘೋಷಿಸಿದೆ.

ಭಾರತೀಯ ಸೇನೆ ಸೇರುವ ಉದ್ದೇಶದಿಂದ ಯುವಕ ಪ್ರತಿದಿನ 10 ಕಿಲೋ ಮೀಟರ್ ಓಡುತ್ತಲೇ ತನ್ನ ಮನೆ ಸೇರಿಕೊಳ್ಳುತ್ತಿದ್ದ. ಈತನ ತಾಯಿ ಅನಾರೋಗ್ಯಪೀಡಿತರಾಗಿದ್ದು ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಈ ವಿಷಯವನ್ನು ಖುದ್ದಾಗಿ ಆತನೇ ವಿಡಿಯೋದಲ್ಲಿ ಹೇಳಿಕೊಂಡಿದ್ದ. ಇದೀಗ ಸಿಎಂ ಅರವಿಂದ್ ಕೇಜ್ರಿವಾಲ್​ ಸರ್ಕಾರ ಸಹಾಯಹಸ್ತ ಚಾಚಿದ್ದು, ಉಚಿತವಾಗಿ ಚಿಕಿತ್ಸೆ ನೀಡುವ ಭರವಸೆ ನೀಡಿದೆ.

ಈಗಾಗಲೇ ಭಾರತೀಯ ಸೇನೆ ಸೇರಲು ಮುಂದಾಗಿರುವ ಪ್ರದೀಪ್​ಗೆ ನಿವೃತ್ತ ಲೆಫ್ಟಿನೆಂಟ್​ ಜನರಲ್​ ಸತೀಶ್ ದುವಾ, ಭಾರತೀಯ ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸಕಲ ರೀತಿಯಿಂದಲೂ ತಾವು ಸಹಾಯ ಮಾಡುವುದಾಗಿ ನಿನ್ನೆ ಪ್ರಕಟಿಸಿದ್ದರು.

ಸೇನಾ ಕಮಾಂಡರ್​​ ಲೆಫ್ಟಿನೆಂಟ್ ಜನರಲ್​ ರಾಣಾ ಅವರೊಂದಿಗೆ ಈಗಾಗಲೇ ಮಾತುಕತೆ ನಡೆಸಿದ್ದು, ತಮ್ಮ ರೆಜಿಮೆಂಟ್​​ನಲ್ಲಿ ನೇಮಕಾತಿ ಮಾಡಿಕೊಳ್ಳಲು ತರಬೇತಿ ನೀಡುವುದಾಗಿ ತಿಳಿಸಿದ್ದಾಗಿ ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

See also  ರೈಲ್ವೇ ಸೇತುವೆ ಮೇಲೆ ಸೆಲ್ಫಿ ಕ್ಲಿಕ್ಕಿಸುವಾಗಲೇ ರೈಲು ಡಿಕ್ಕಿ, ಇಬ್ಬರ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು