News Kannada
Wednesday, March 22 2023

ದೆಹಲಿ

ಶುಲ್ಕ ಕಟ್ಟಲಾಗದ ದಲಿತ ವಿದ್ಯಾರ್ಥಿಗೆ ಪ್ರವೇಶ ಕಲ್ಪಿಸುವಂತೆ, ಐಐಟಿಗೆ ಸುಪ್ರೀಂ ಕೋರ್ಟ್‌ ನಿರ್ದೇಶನ

Photo Credit :

ನವದೆಹಲಿ: ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ ಆದರೆ, ತಾಂತ್ರಿಕ ಕಾರಣಗಳಿಂದಾಗಿ ನಿಗದಿತ ಸಮಯಕ್ಕೆ ಶುಲ್ಕ ಕಟ್ಟಲಾಗದ ದಲಿತ ವಿದ್ಯಾರ್ಥಿಯೊಬ್ಬರಿಗೆ ಪ್ರವೇಶ ಕಲ್ಪಿಸುವಂತೆ, ಐಐಟಿ-ಬಾಂಬೆಗೆ ಸುಪ್ರೀಂ ಕೋರ್ಟ್‌ ಸೋಮವಾರ ನಿರ್ದೇಶನ ನೀಡಿದೆ.

ಐಐಟಿ-ಬಾಂಬೆಯಲ್ಲಿ ಸಿಕ್ಕಿರುವ ಅತ್ಯಮೂಲ್ಯವಾದ ಪ್ರವೇಶ ಕೈತಪ್ಪುವ ಸ್ಥಿತಿಯಲ್ಲಿ ಇರುವ ದಲಿತ ವಿದ್ಯಾರ್ಥಿಯೊಬ್ಬರು ನ್ಯಾಯಾಲಯದ ಮುಂದಿದ್ದಾರೆ. ಪ್ರವೇಶ ಅವಕಾಶ ಸಿಕ್ಕಿದ್ದರೂ ಶುಲ್ಕ ಪಾವತಿಸುವಲ್ಲಿ ಆದ ತಾಂತ್ರಿಕ ಕಾರಣಗಳಿಂದಾಗಿಯೇ ಅವರಿಗೆ ಆ ಅವಕಾಶ ಕೈತಪ್ಪುತ್ತದೆ ಎಂದಾದರೆ ಅದು ನ್ಯಾಯದ ದೊಡ್ಡ ವಿಡಂಬನೆಯಾಗುತ್ತದೆ’ ಎಂದು ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್‌ ಹಾಗೂ ಎ.ಎಸ್‌. ಬೋಪಣ್ಣ ಅವರಿದ್ದ ನ್ಯಾಯಪೀಠ ಅಭಿಪ್ರಾಯಪಟ್ಟಿತು.

ವಿದ್ಯಾರ್ಥಿಯ ಪರಿಸ್ಥಿತಿಯನ್ನು ಪರಿಗಣಿಸಿ ಐಐಟಿ-ಬಾಂಬೆಯಲ್ಲಿ ಪ್ರವೇಶ ಕಲ್ಪಿಸುವಂತೆ ಜಂಟಿ ಸೀಟು ಹಂಚಿಕೆ ಪ್ರಾಧಿಕಾರದ (ಜೆಒಎಸ್‌ಎಎ) ಪರವಾಗಿ ಹಾಜರಿದ್ದ ವಕೀಲರಿಗೆ ಸೂಚಿಸಿತು.

‘ವಿದ್ಯಾರ್ಥಿಯ ಬಳಿಯಲ್ಲಿ ಹಣವಿರಲಿಲ್ಲ. ಆತನ ಸಹೋದರಿ ಹಣವನ್ನು ವರ್ಗಾಯಿಸಬೇಕಿತ್ತು. ಆದರೆ, ಆ ಸಂದರ್ಭದಲ್ಲಿ ತಾಂತ್ರಿಕ ತೊಂದರೆ ಆಗಿದೆ. ವಿದ್ಯಾರ್ಥಿಯು ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಅವರದೇ ನಿರ್ಲಕ್ಷ್ಯ ಎಂದಾಗಿದ್ದಾರೆ, ನಾವು ನಿಮ್ಮನ್ನು ಕೇಳುತ್ತಿರಲಿಲ್ಲ’ ಎಂದ ನ್ಯಾಯಪೀಠವು, ಎಲ್ಲರ ಬಳಿಯೂ ಹಲವಾರು ಕ್ರೆಡಿಟ್‌ ಕಾರ್ಡ್‌ಗಳು ಇರುತ್ತವೆ ಎಂದು ನಿರೀಕ್ಷಿಸಲಾಗದು ಎಂದು ಹೇಳಿತು.

ಈಗಾಗಲೇ ಎಲ್ಲ ಸೀಟುಗಳೂ ಭರ್ತಿಯಾಗಿವೆ ಎಂದು ಜೆಒಎಸ್‌ಎಎ ಅಧಿಕಾರಿಗಳು ನ್ಯಾಯಾಲಯಕ್ಕೆ ತಿಳಿಸಿದರು. ಐಐಟಿ- ಬಾಂಬೆಯಲ್ಲಿ, ಬಿ-ಟೆಕ್‌ ಸಿವಿಲ್‌ ಎಂಜಿನಿಯರಿಂಗ್‌ ವಿಭಾಗದಲ್ಲಿ ಈ ವಿದ್ಯಾರ್ಥಿಗೆ ಅ.27ರಂದು ಸೀಟು ಹಂಚಿಕೆಯಾಗಿತ್ತು.

ಪೂರ್ತಿಯಾಗಿ ಪ್ರವೇಶ ಶುಲ್ಕ ಭರಿಸಲು ಹಣದ ಕೊರತೆ ಆಗಿತ್ತು. ಸಹೋದರಿ ಅ.30ರಂದು ಹಣ ವರ್ಗಾಯಿಸಿದ ನಂತರ, ಅವರು ಮತ್ತೆ ಪ್ರವೇಶ ಶುಲ್ಕ ಕಟ್ಟಲು ಮುಂದಾದರು. ಆದರೆ, ಹಲವು ಪ್ರಯತ್ನಗಳ ಬಳಿಕವೂ ಅದು ಸಾಧ್ಯವಾಗಿರಲಿಲ್ಲ.

See also  ಕೋವಿಡ್ ಲಸಿಕೆ ಕಡ್ಡಾಯ ಮಾಡಿಲ್ಲ: ಸುಪ್ರೀಂ ಕೋರ್ಟ್‌ಗೆ ಕೇಂದ್ರದ ಸ್ಪಷ್ಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು