News Kannada
Tuesday, March 21 2023

ದೆಹಲಿ

ಭಾರತೀಯ ಜನತಾ ಪಕ್ಷದ ಸಂಸದರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಖಡಕ್ ಎಚ್ಚರಿಕೆ

PM Modi to visit Mandya and Dharwad on March 12
Photo Credit :

ನವದೆಹಲಿ : ಸಂಸತ್ ಚಳಿಗಾಲ ಅಧಿವೇಶನದ ಸಂದರ್ಭದಲ್ಲಿ ನಿರಂತರವಾಗಿ ಗೈರು ಹಾಜರಾಗುತ್ತಿದ್ದ ಭಾರತೀಯ ಜನತಾ ಪಕ್ಷದ ಸಂಸದರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಖಡಕ್ ಎಚ್ಚರಿಕೆಯನ್ನು ನೀಡಿದ್ದಾರೆ. “ನಿಮ್ಮನ್ನು ನೀವು ಬದಲಿಸಿಕೊಳ್ಳಿರಿ, ಇಲ್ಲದಿದ್ದರೆ ಅಲ್ಲಿಯೇ ಬದಲಾವಣೆಗಳನ್ನು ತರಲಾಗುವುದು,” ಎಂದು ಎಚ್ಚರಿಸಿದ್ದಾರೆ.

ಮಂಗಳವಾರ ದೆಹಲಿಯಲ್ಲಿ ನಡೆದ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಪ್ರಧಾನಿ ಮೋದಿ ಮಾತನಾಡಿದರು. ತಮ್ಮ ಪಕ್ಷದ ಸಂಸದರು ಮತ್ತು ಮಂತ್ರಿಗಳಿಗೆ ಶಿಸ್ತು, ಸಮಯಪ್ರಜ್ಞೆ ಮತ್ತು ಸರದಿಯಲ್ಲಿ ಮಾತನಾಡಬೇಡಿ ಎಂದು ಸಲಹೆ ನೀಡಿದ ಪ್ರಧಾನಿ ಮೋದಿ, ಮಕ್ಕಳಂತೆ” ವರ್ತಿಸುವ ಬಿಜೆಪಿ ನಾಯಕರ ವಿರುದ್ಧ ಕಿಡಿ ಕಾರಿದರು.

“ದಯವಿಟ್ಟು ಸಂಸತ್ ಮತ್ತು ಸಭೆಗಳಿಗೆ ನಿರಂತರವಾಗಿ ಹಾಜರಾಗಬೇಕು. ಸಣ್ಣ ಮಕ್ಕಳ ರೀತಿಯಲ್ಲಿ ಇದರ ಬಗ್ಗೆ ಪದೇ ಪದೆ ನಿಮ್ಮ ಮೇಲೆ ಒತ್ತಡ ಹೇರುವುದಕ್ಕೆ ನನಗೆ ಸರಿ ಎನ್ನಿಸುವುದಿಲ್ಲ. ನಿಮ್ಮನ್ನು ನೀವು ಬದಲಾಯಿಸಿಕೊಳ್ಳದಿದ್ದರೆ ಸೂಕ್ತ ಸಮಯದಲ್ಲಿ ಬದಲಾವಣೆಗಳನ್ನು ತರಲಾಗುತ್ತವೆ,” ಎಂದು ಹೇಳಿದರು. ಈ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ವಾಣಿಜ್ಯ ಸಚಿವ ಪಿಯೂಷ್ ಗೋಯಲ್, ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಹಿರಿಯ ಸಚಿವರು ಹಾಜರಾಗಿದ್ದರು.

See also  ಮನ್ ಕಿ ಬಾತ್ 83ನೇ ಆವೃತ್ತಿ: ಹುತಾತ್ಮ ವೀರ ಯೋಧರಿಗೆ ನಮನ ಸಲ್ಲಿಸಿದ ಪ್ರಧಾನಿ ಮೋದಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು