News Kannada
Friday, March 24 2023

ದೆಹಲಿ

ಲಖಿಂಪುರ ಖೇರಿಯಲ್ಲಿ ರೈತರ ಹತ್ಯೆ ಪೂರ್ವ ಯೋಜಿತ ಪಿತೂರಿ: ಕಾಂಗ್ರೆಸ್ ನೋಟಿಸ್

Photo Credit :

ಹೊಸದಿಲ್ಲಿ: ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ರೈತರ ಹತ್ಯೆಯನ್ನು ಯೋಜಿತ ಪಿತೂರಿ ಎಂದು ತನಿಖಾ ವರದಿ ವಿವರಿಸಿದ ನಂತರ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸಬೇಕು ಎಂದು ಸಂಸತ್ತಿನಲ್ಲಿ ಇಂದು ಪ್ರತಿಪಕ್ಷಗಳು ಒತ್ತಾಯಿಸಿವೆ.

ಸಿಟ್ ವರದಿಯ ಕುರಿತು ಚರ್ಚೆಗೆ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನೋಟಿಸ್ ನೀಡಿದ್ದು, “ಲಖೀಂಪುರದಲ್ಲಿ ನಡೆದ ರೈತರ ಹತ್ಯಾಕಾಂಡ ಪೂರ್ವ ಯೋಜಿತ ಪಿತೂರಿಯಾಗಿದೆ ಹಾಗೂ ನಿರ್ಲಕ್ಷ್ಯದ ಕೃತ್ಯವಲ್ಲ ಎಂದು ಉತ್ತರಪ್ರದೇಶ ಪೊಲೀಸ್ ಎಸ್‌ಐಟಿ ವರದಿ ಎತ್ತಿ ತೋರಿಸಿದೆ” ಎಂದು ಕಾಂಗ್ರೆಸ್ ಸಂಸದರು ಇಂದು ಬೆಳಿಗ್ಗೆ ತಮ್ಮ ನೋಟಿಸ್‌ನಲ್ಲಿ ಬರೆದಿದ್ದಾರೆ.

ವಿಶೇಷ ತನಿಖಾ ತಂಡದ (ಎಸ್‌ಐಟಿ) ವರದಿಯ ನಂತರ ಪ್ರಧಾನಿ ನರೇಂದ್ರ ಮೋದಿ ಸರಕಾರದಲ್ಲಿ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸಬೇಕು ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಲೋಕಸಭೆಗೆ ನೀಡಿದ ನೋಟಿಸ್‌ನಲ್ಲಿ ಹೇಳಿದ್ದಾರೆ.

“ಸರಕಾರವು ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾ ಅವರನ್ನು ತಕ್ಷಣವೇ ವಜಾಗೊಳಿಸಬೇಕು ಹಾಗೂ ಸಂತ್ರಸ್ತರ ಕುಟುಂಬಗಳಿಗೆ ನ್ಯಾಯವನ್ನು ತಲುಪಿಸುವುದನ್ನು ಖಚಿತಪಡಿಸಿಕೊಳ್ಳಬೇಕು” ಎಂದು ಅವರು ಹೇಳಿದರು.

ನಿನ್ನೆಯ ವಿವರವಾದ ಸಿಟ್ ವರದಿಯು ಲಖೀಂಪುರ ಖೇರಿಯಲ್ಲಿ ಆಶಿಶ್ ಮಿಶ್ರಾ ಚಲಾಯಿಸುತ್ತಿದ್ದ ಕಾರನ್ನು “ಕೊಲೆ ಮಾಡುವ ಉದ್ದೇಶದಿಂದ” ರೈತರ ಮೇಲೆ ಓಡಿಸಲಾಯಿತು ಮತ್ತು ಇದು “ನಿರ್ಲಕ್ಷ್ಯದಿಂದ ಸಾವಲ್ಲ” ಎಂದು ಹೇಳಿತ್ತು.

See also  ಟ್ವಿಟ್ಟರ್ ಪಕ್ಷಿ ಬೇಯಿಸಿದ ಕಾಂಗ್ರೆಸ್ ಮುಖಂಡ ಪಕ್ಷದಿಂದ ವಜಾ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12795
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು