News Kannada
Wednesday, March 29 2023

ದೆಹಲಿ

14 ಲಕ್ಷ `ಒಮಿಕ್ರಾನ್’ ಕೇಸ್ ಗಳು ದಾಖಲಾಗುವ ಸಾಧ್ಯತೆ :ಕೇಂದ್ರ ಸರ್ಕಾರ ಎಚ್ಚರಿಕೆ

Photo Credit :
ನವದೆಹಲಿ : ವಿಶ್ವದಾದ್ಯಂತ ಆತಂಕ ಸೃಷ್ಟಿಸಿರುವ ಕೊರೊನಾ ರೂಪಾಂತರಿ ಒಮಿಕ್ರಾನ್ ಸೋಂಕು ಭಾರತದಲ್ಲಿ ಸಮುದಾಯಕ್ಕೆ ಹರಡಿದರೆ ನಿತ್ಯ 14 ಲಕ್ಷ ಪ್ರಕರಣಗಳು ದೃಢಪಡುವ ಸಾಧ್ಯತೆ ಇದೆ ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.ಈ ಹಿನ್ನೆಲೆಯಲ್ಲಿ ಜನರು ಮುಂಜಾಗ್ರತ ಕ್ರಮವಾಗಿ ಅನಗತ್ಯ ಓಡಾಟ ಮತ್ತು ಹೊಸ ವರ್ಷಾಚರಣೆ, ಸಭೆ ಸಮಾರಂಭಗಳಲ್ಲಿ ಸೇರುವುದಕ್ಕೆ ಕಡಿವಾಣ ಹಾಕಬೇಕಾದ ಅನಿವಾರ್ಯತೆ ಇದೆ. ಮಾಸ್ಕ್ ಮತ್ತು ಸಾಮಾಜಿಕ ಅಂತರ ಸೇರಿ ಕೋವಿಡ್ ಮಾರ್ಗಸೂಚಿ ಕಡ್ಡಾಯ ಪಾಲನೆ ಮಾಡುವಂತೆ ಕೇಂದ್ರ ಸರ್ಕಾರ ಮನವಿ ಮಾಡಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭಾರತದ ಕೋವಿಡ್ ಕಾರ್ಯಪಡೆ ಮುಖ್ಯಸ್ಥ ವಿ.ಕೆಪೌಲ್, ಬ್ರಿಟನ್ ನಲ್ಲಿ ನಿತ್ಯ ಸರಾಸರಿ 1 ಲಕ್ಷ ಜನರಲ್ಲಿ ಸೋಂಕು ದೃಢಪಡುತ್ತಿದ್ದರೆ. .

ಭಾರತದಲ್ಲಿ ಸಮುದಾಯಕ್ಕೆ ಹರಡಿದರೆ ಪ್ರತಿನಿತ್ಯ 14 ಲಕ್ಷ ಪ್ರಕರಣಗಳು ದೃಢಪಡುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ.

ದೇಶದಲ್ಲಿ ಕೊರೊನಾ ವೈರಸ್‌ ರೂಪಾಂತರಿ ಓಮಿಕ್ರಾನ್‌ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ನಿನ್ನೆ ಒಂದೇ ದಿನ 13 ಓಮಿಕ್ರಾನ್‌ ಪ್ರಕರಣಗಳು ದೃಢಪಟ್ಟಿದ್ದು, ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 101 ಕ್ಕೇರಿದೆ.

ದೆಹಲಿಯಲ್ಲಿ ಸೋಂಕು ಪ್ರಕರಣಗಳ ಸಂಖ್ಯೆ 22ಕ್ಕೇರಿದೆ. ಮಹಾರಾಷ್ಟ್ರದಲ್ಲಿ 32 ಪ್ರಕರಣಗಳು ವರದಿಯಾಗಿವೆ. ರಾಜಸ್ಥಾನ್‌ನಲ್ಲಿ 17, ಕರ್ನಾಟಕ ಮತ್ತು ತೆಲಂಗಾಣದಲ್ಲಿ ತಲಾ 8. ಗುಜರಾತ್‌, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಆಂಧ್ರಪ್ರದೇಶ ರಾಜ್ಯಗಳಲ್ಲಿ ಒಮಿಕ್ರಾನ್ ಪತ್ತೆಯಾಗಿದೆ.

See also  ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಹತ್ವದ ಸಚಿವ ಸಂಪುಟ ಸಭೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12795
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು