News Kannada
Sunday, April 02 2023

ದೆಹಲಿ

ನವದೆಹಲಿ: ಕೆಮ್ಮಿನ ಸಿರಪ್ ಸೇವಿಸಿ ಮೂವರು ಮಕ್ಕಳು ಸಾವು

Photo Credit :

ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರಾಜ್ಯ ಸರಕಾರ ನಡೆಸುತ್ತಿರುವ ಮೊಹಲ್ಲಾ ಚಿಕಿತ್ಸಾಲಯದಲ್ಲಿ ನೀಡಲಾಗುತ್ತಿದ್ದ ಕೆಮ್ಮಿನ ಸಿರಪ್ ಸೇವಿಸಿ ಮೂವರು ಮಕ್ಕಳು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ ಎಂದು ಆರೋಗ್ಯ ಸೇವೆಗಳ ನಿರ್ದೇಶನಾಲಯ (ಡಿಜಿಎಚ್‌ಎಸ್) ತನ್ನ ತನಿಖಾ ವರದಿಯಲ್ಲಿ ಉಲ್ಲೇಖಿಸಿದೆ.

ಒಟ್ಟು 16 ಮಕ್ಕಳನ್ನು ಕಲಾವತಿ ಸರನ್ ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅದರಲ್ಲಿ ಮೂವರು ಸಾವನ್ನಪ್ಪಿದ್ದಾರೆ.

ನವದೆಹಲಿಯ ಕಲಾವತಿ ಸರಣ್ ಮಕ್ಕಳ ಆಸ್ಪತ್ರೆಯಲ್ಲಿ 16 ಡೆಕ್ಸ್ಟ್ರೋಮೆಥೋರ್ಫಾನ್ ವಿಷದ ಪ್ರಕರಣಗಳು ವರದಿಯಾಗಿವೆ, ಅದರಲ್ಲಿ ಮೂರು ಮಕ್ಕಳು ಆಸ್ಪತ್ರೆಯಲ್ಲಿಯೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಔಷಧವನ್ನು ಒಮೆಗಾ ಫಾರ್ಮಾಸ್ಯುಟಿಕಲ್ಸ್ ತಯಾರಿಸಿದೆ ಎಂದು ವಿಚಾರಣೆಯ ವರದಿ ಹೇಳಿದೆ. ಪತ್ರದಲ್ಲಿ, ಡಿಜಿಎಚ್‌ಎಸ್ ಎಲ್ಲಾ ಡಿಸ್ಪೆನ್ಸರಿಗಳು ಮತ್ತು ಮೊಹಲ್ಲಾ ಚಿಕಿತ್ಸಾಲಯಗಳಿಗೆ ‘ನಾಲ್ಕು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಡೆಕ್ಸ್ಟ್ರೋಮೆಥೋರ್ಫಾನ್ ಅನ್ನು ಶಿಫಾರಸು ಮಾಡದಂತೆ’ ಸೂಚನೆ ನೀಡುವಂತೆ ದೆಹಲಿ ಸರ್ಕಾರವನ್ನು ಕೇಳಿಕೊಂಡಿದೆ. ಮಾಧ್ಯಮ ಸಂಸ್ಥೆಯೊಂದಿಗೆ ಮಾತನಾಡಿದ ಎಐಐಎಂಎಸ್ ಪಾಟ್ನಾದ ಮಕ್ಕಳ ವಿಭಾಗದ ಹೆಚ್ಚುವರಿ ಪ್ರಾಧ್ಯಾಪಕ ಡಾ.ಚಂದ್ರ ಮೋಹನ್ ಕುಮಾರ್, ‘ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಔಷಧವನ್ನು ಬಳಸಲು ಶಿಫಾರಸು ಮಾಡದಿದ್ದರೂ, ಇದನ್ನು ಇನ್ನೂ ಬಳಸಲಾಗುತ್ತಿದೆ ಇದರಿಂದ ದೃಷ್ಟಿ ಮಸುಕಾಗುವಿಕೆ, ಅರೆನಿದ್ರಾವಸ್ಥೆ, ಚಡಪಡಿಕೆ ಮತ್ತು ಕಿರಿಕಿರಿಯಂತಹ ಅಡ್ಡಪರಿಣಾಮಗಳು ಬೀರುತ್ತದೆ ಅಂತ ಹೇಳಿದ್ದಾರೆ.

See also  ಮೇಕೆದಾಟು ಯೋಜನೆ: ಜನವರಿ 25ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು