News Kannada
Saturday, December 02 2023
ದೆಹಲಿ

ಕೇಂದ್ರದ ಚಳಿಗಾಲದ ಅಧಿವೇಶನವು ಹೊಸ ಸಂಸತ್‌ ಭವನದಲ್ಲಿ ನಡೆಯಲಿದೆ: ಓಂ ಪ್ರಕಾಶ್‌ ಬಿರ್ಲಾ

om Birla
Photo Credit : Twitter

ದೆಹಲಿ: ಕೇಂದ್ರದ ಚಳಿಗಾಲದ ಅಧಿವೇಶನವು ಹೊಸ ಸಂಸತ್‌ ಭವನದಲ್ಲಿ ನಡೆಯಲಿದೆ ಎಂದು ಲೋಕಸಭೆಯ ಸ್ಪೀಕರ್‌ ಓಂ ಪ್ರಕಾಶ್‌ ಬಿರ್ಲಾ ಹೇಳಿದ್ದಾರೆ.

ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು “ಹೊಸ ಸಂಸತ್ತಿನಲ್ಲಿ ಚಳಿಗಾಲದ ಅಧಿವೇಶನವನ್ನು ಪ್ರಾರಂಭಿಸಲು ನಾವು ಪ್ರಯತ್ನಿಸುತ್ತಿದ್ದೇವೆ. ತಾಂತ್ರಿಕ ಮತ್ತು ಭದ್ರತಾ ದೃಷ್ಟಿಕೋನದಿಂದ, ಈ ಹೊಸ ಕಟ್ಟಡವು ಹಳೆಯ ಸಂಸತ್ತಿನ ಕಟ್ಟಡಕ್ಕಿಂತ ಬಹಳ ಮುಂದಿದೆ. ಆದರೆ ಸಂಸತ್ತಿನ ಹಳೆಯ ಕಟ್ಟಡವು ಅದರ ಭಾಗವಾಗಿ ಉಳಿಯುತ್ತದೆ.” ಎಂದಿದ್ದಾರೆ.

“ಸದನದ ಉತ್ಪಾದಕತೆಯು ಹೆಚ್ಚಳವಾಗಿದೆ. ತಡರಾತ್ರಿಯವರೆಗೂ ಈಗ ಅಧಿವೇಶನಗಳು ನಡೆಯುತ್ತಿವೆ” ಎಂದು ಹರ್ಷ ವ್ಯಕ್ತಪಡಿಸಿರುವ ಅವರು “ಸದನ ಸುಗಮವಾಗಿ ನಡೆಯುವ ದೃಷ್ಟಿಯಿಂದ ಸದನದಲ್ಲಿ ಶಿಸ್ತು, ಸೌಹಾರ್ದತೆ ಕಾಪಾಡಬೇಕು ಎಂದು ನಾನು ಹೇಳುತ್ತೇನೆ. ಎಲ್ಲಾ ಪಕ್ಷಗಳು ತಮ್ಮ ನಾಯಕರೊಂದಿಗೆ ಮಾತಾಡಬೇಕು. ಅವರ ಸಹಕಾರದಿಂದ ಸದನದಲ್ಲಿ ಉತ್ಪಾದಕತೆ ಮತ್ತು ಚರ್ಚೆಯ ಮಟ್ಟ ಗಣನೀಯವಾಗಿ ಹೆಚ್ಚಿದೆ” ಎಂದಿದ್ದಾರೆ.

ಕೇಂದ್ರ ನಗರಾಭಿವೃದ್ಧಿ ಸಚಿವ ಹರ್ದೀಪ್ ಸಿಂಗ್ ಪುರಿ ಪ್ರಕಾರ, ಈ ವರ್ಷದ ಅಕ್ಟೋಬರ್ ವೇಳೆಗೆ ಹೊಸ ಸಂಸತ್ ಭವನದ ನಿರ್ಮಾಣ ಪೂರ್ಣಗೊಳ್ಳಲಿದೆ.

See also  ಕಾರ್ಮಿಕ ಸಚಿವರ ವಜಾಕ್ಕೆ ಆಗ್ರಹಿಸಿ ಸಿಡಬ್ಲ್ಯು ಎಫ್ಐ ಪ್ರತಿಭಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು