News Kannada
Thursday, June 01 2023
ದೆಹಲಿ

ದೆಹಲಿ: ಜು.25ರಂದು ನೂತನ ರಾಷ್ಟ್ರಪತಿಯಾಗಿ ಮುರ್ಮು ಪ್ರಮಾಣ ವಚನ

Prez Murmu to join Isha Maha Shivratri celebrations
Photo Credit : Twitter

ದೆಹಲಿ: ಎಲ್ಲರ ನಿರೀಕ್ಷೆಯಂತೆ ಕೊನೆಗೂ ಭಾರತದ 15ನೇ ರಾಷ್ಟ್ರಪತಿ ಹುದ್ದೆಗೆ ಎನ್​ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಗೆಲುವು ಕಂಡಿದ್ದು, ಜುಲೈ 25 ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಹಾಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅವಧಿ ಜುಲೈ 24 ರಂದು ಕೊನೆಗೊಳ್ಳಲಿದೆ. ದ್ರೌಪದಿ ಮುರ್ಮು ಅವರು ಈ ಹುದ್ದೆಯನ್ನು ಅಲಂಕರಿಸಿದ ಮೊದಲ ಬುಡಕಟ್ಟು ವ್ಯಕ್ತಿಯಾಗಿದ್ದಾರೆ.

ದೇಶದ ನೂತನ ರಾಷ್ಟ್ರಪತಿಯಾಗಿ ಆಯ್ಕೆಯಾದ ದ್ರೌಪದಿ ಮುರ್ಮು ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಟ್ವಿಟರ್‌ನಲ್ಲೂ ಶುಭಾಶಯ ತಿಳಿಸಿರುವ ಪ್ರಧಾನಿ ಮೋದಿ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ.

 

ಈ ಬಗ್ಗೆ ಟ್ವೀಟ್ ಮಾಡಿರುವಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅವರು, ಭಾರತದ ರಾಷ್ಟ್ರಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಭಾರಿ ಬಹುಮತದೊಂದಿಗೆ ಆಯ್ಕೆಯಾಗಿ ಹೊಸ ದಾಖಲೆ ಬರೆದ ದ್ರೌಪದಿ ಮುರ್ಮು ಅವರಿಗೆ ಹಾರ್ದಿಕ ಅಭಿನಂದನೆಗಳು. ಸಮಾಜದ ಕೆಳಸ್ತರದಿಂದ ಬಂದು ರಾಷ್ಟ್ರದ ಪರಮೋನ್ನತ ಹುದ್ದೆಯನ್ನು ಅವರು ಅಲಂಕರಿಸುತ್ತಿರುವುದು ನಮ್ಮ ಪ್ರಜಾಪ್ರಭುತ್ವದ ಯಶಸ್ಸಿನ ಸಂಕೇತ ಎಂದು ಬರೆದುಕೊಂಡಿದ್ದಾರೆ.

 

See also  ಮಂಗಳೂರು : ಪತ್ರಿಕಾ ದಿನಾಚರಣೆ, ಮ್ಯೋಗ್ಲಿಂಗ್ ಸ್ಮರಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು