News Kannada
Wednesday, March 22 2023

ದೆಹಲಿ

ಉತ್ತರ ದೆಹಲಿಯಲ್ಲಿ ವ್ಯಕ್ತಿಯ ಬರ್ಬರ ಹತ್ಯೆ

Puttur Municipal Council member commits suicide
Photo Credit : Pexels

ನವದೆಹಲಿ: ಉತ್ತರ ದೆಹಲಿಯಲ್ಲಿ 40 ವರ್ಷದ ವ್ಯಕ್ತಿಯನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಪೊಲೀಸ್ಅ‌ ಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಆರೋಪಿಗಳನ್ನು ಗುರುತಿಸಲಾಗಿದ್ದು, ಅವರ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉಪ ಪೊಲೀಸ್ ಆಯುಕ್ತ (ಉತ್ತರ) ಸಾಗರ್ ಸಿಂಗ್ ಕಲ್ಸಿ ಅವರ ಪ್ರಕಾರ, ಮಂಗಳವಾರ ದೆಹಲಿಯ ಮೋರಿ ಗೇಟ್ ಬಳಿಯ ಅಂಗಡಿಯಲ್ಲಿ ಶವವಿರುವ ಬಗ್ಗೆ ಮಾಹಿತಿ ಬಂದಿದ್ದು, ನಂತರ ಪೊಲೀಸ್ ತಂಡವನ್ನು ಸ್ಥಳಕ್ಕೆ ಕಳುಹಿಸಲಾಗಿದೆ.

“ಪೊಲೀಸ್ ತಂಡವು ಸ್ಥಳಕ್ಕೆ ತಲುಪಿ ತಪಾಸಣೆ ನಡೆಸಿದೆ.  ಮೃತನನ್ನು ಉತ್ತರ ಪ್ರದೇಶದ ಔರೈಯಾದ ಓಂ ನಗರದ ನಿವಾಸಿ ಅಖಿಲೇಶ್ ತಿವಾರಿ ಎಂದು ಗುರುತಿಸಲಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ.

ಅಪರಾಧ ಮತ್ತು ವಿಧಿವಿಜ್ಞಾನ ಪ್ರಯೋಗಾಲಯದ ತಂಡಗಳು ಸ್ಥಳವನ್ನು ಪರಿಶೀಲಿಸಿವೆ. “ಸಂಬಂಧಿಕರ ಹೇಳಿಕೆಯನ್ನು ದಾಖಲಿಸಿದ ನಂತರ, ಶವವನ್ನು ಶವಪರೀಕ್ಷೆಗಾಗಿ ಸಬ್ಜಿ ಮಂಡಿ ಶವಾಗಾರಕ್ಕೆ ಕಳುಹಿಸಲಾಗಿದೆ. ಮರಣೋತ್ತರ ಪರೀಕ್ಷೆಯ ಸಮಯದಲ್ಲಿ, ಮೃತರ ತಲೆಬುರುಡೆಯಲ್ಲಿ ಗುಂಡು ಪತ್ತೆಯಾಗಿದ್ದು, ಅದು ಎಡ ಕಣ್ಣಿನಿಂದ ನುಸುಳಿದೆ” ಎಂದು ಅಧಿಕಾರಿ ತಿಳಿಸಿದ್ದಾರೆ.  ಸಬ್ಜಿ ಮಂಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

See also  ಕನ್ನಡ ಸಾಹಿತ್ಯದ ಪ್ರಮುಖ ಕಾದಂಬರಿಗಳಲ್ಲಿ ಒಂದು ’ಕಾನೂರು ಹೆಗ್ಗಡತಿ’
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

30409

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು