News Kannada
Saturday, March 25 2023

ದೆಹಲಿ

ದೆಹಲಿ: ವಿಶ್ವ ಪುಸ್ತಕ ಮೇಳದಲ್ಲಿ ಕೊಡಗಿನ ಬಾಲಕಿಯ ಸಾಧನೆ

World Book Fair in Delhi: Kodagu girl's achievements
Photo Credit : News Kannada

ದೆಹಲಿ: ಯುವ ಬರಹಗಾರರನ್ನು ಗುರುತಿಸಿ ಪ್ರೋತ್ಸಾಹಿಸುವ ಸಲುವಾಗಿ ಕೇಂದ್ರ ಸರಕಾರ ದೇಶದಾದ್ಯಂತ ಉತ್ಸಾಹಿ ಯುವ ಬರಹಗಾರರನ್ನು ಆಯ್ಕೆ ಮಾಡಿದ್ದು ಕೊಡಗು ಜಿಲ್ಲೆಯ ಕಾಕೋಟು ಪರಂಬುವಿನ ಮೇವಡ ಅಯ್ಯಣ್ಣ ಹಾಗೂ  ಚೇಂದಂಡ(ಹೊಸೂರು) ಮೀನಾಕ್ಷಿ ದಂಪತಿಯ ಪುತ್ರಿ ಯುವ ಬರಹಗಾರ್ತಿ ಆಲಿಯಾ ಚೋಂದಮ್ಮ ಆಯ್ಕೆಯಾಗುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾಳೆ.

ದೇಶದಾದ್ಯಂತ ಒಟ್ಟು 75 ಯುವ ಬರಹಗಾರರನ್ನು ಕೇಂದ್ರ ಸರಕಾರ ಆಯ್ಕೆ ಮಾಡಿದ್ದು ಕರ್ನಾಟಕದಿಂದ ಆಯ್ಕೆಗೊಂಡ ಮೂವರಲ್ಲಿ ಕೊಡಗಿನ ಆಲಿಯಾ ಚೋಂದಮ್ಮ ಇಡೀ ದೇಶದಲ್ಲೇ ಅತೀ ಕಿರಿಯ ವಯಸ್ಸಿನ(16 ವರ್ಷ) ಬರಹಗಾರ್ತಿಯಾಗಿ ಆಯ್ಕೆಯಾಗಿರುವುದು ಹೆಮ್ಮೆಯ ವಿಷಯವಾಗಿದೆ. ಆಲಿಯಾ ಚೋಂದಮ್ಮ ಗೋಣಿಕೊಪ್ಪಲಿನ ಕಾಲ್ಸ್ ವಿದ್ಯಾಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ. ಪೂರೈಸಿ ಪ್ರಸ್ತುತ ಬೆಂಗಳೂರಿನ ಬೆಥನಿಸ್  ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿದ್ದಾಳೆ.

ದೆಹಲಿಯಲ್ಲಿ ನಡೆಯುತ್ತಿರುವ 9 ದಿನಗಳ ವರ್ಲ್ಡ್ ಬುಕ್ ಫೇರ್ ನಲ್ಲಿ ಕೊಡಗಿನ ಸ್ವಾತಂತ್ರ್ಯ ಹೋರಾಟಗಾರರ ಕುರಿತು ಆಲಿಯಾ ಚೋಂದಮ್ಮ ಬರೆದಿರುವ “ದಿ ಲಾಸ್ಟ್ ಹೀರೋಸ್ ಆಫ್  ಕೊಡಗು” ಪುಸ್ತಕ ಬಿಡುಗಡೆಗೊಂಡಿದೆ.

See also  ಭಾರತದಲ್ಲಿ 24 ಗಂಟೆಗಳಲ್ಲಿ 8,586 ಹೊಸ ಕೋವಿಡ್ ಪ್ರಕರಣಗಳು ವರದಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು