News Kannada
Monday, September 25 2023
ದೆಹಲಿ

ಸಾಹಿತಿ ಬೈರಪ್ಪ, ಎಸ್‌. ಎಂ. ಕೃಷ್ಣ, ಸುಧಾಮೂರ್ತಿಗೆ ಮಾ. 22ರಂದು ಪದ್ಮಪ್ರಶಸ್ತಿ ಪ್ರದಾನ

Sudha Murthy, S.L. Bhyrappa, S.M. Krishna among 8 Padma awardees from K'taka
Photo Credit :

ನವದೆಹಲಿ: ದೇಶದ ಪ್ರತಿಷ್ಠಿತ ಪದ್ಮ ಪ್ರಶಸ್ತಿಯನ್ನು  ಮಾರ್ಚ್ 22ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದಲ್ಲಿ ಒಟ್ಟು 106 ಮಂದಿಗೆ ಪ್ರಸಕ್ತ ಸಾಲಿನ ಪದ್ಮ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.

ಕರ್ನಾಟಕದಿಂದ ಯಾರಿಗೆಲ್ಲ ಪ್ರಶಸ್ತಿ: ಕರ್ನಾಟಕದಿಂದ ಸಾಹಿತಿ ಎಸ್.​ಎಲ್. ಭೈರಪ್ಪ ಮತ್ತು ಮಾಜಿ ಸಿಎಂ ಎಸ್.​ಎಂ. ಕೃಷ್ಣ ಮತ್ತು ಇನ್ಫೋಸಿಸ್‌ ಮುಖ್ಯಸ್ಥೆ ಸುಧಾ ಮೂರ್ತಿ ಸೇರಿದಂತೆ ಎಂಟು ಮಂದಿ ಆಯ್ಕೆಯಾಗಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ಮಹನೀಯರನ್ನು ಗೌರವಿಸುವ ನಿಟ್ಟಿನಲ್ಲಿ ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿ ನೀಡಲಾಗುತ್ತದೆ.

ಕರ್ನಾಟಕದಿಂದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಪ್ರಸಕ್ತ ಸಾಲಿನ ಪದ್ಮವಿಭೂಷಣ (ಸಾರ್ವಜನಿಕ ವ್ಯವಹಾರ ಕ್ಷೇತ್ರ), ಹಿರಿಯ ಸಾಹಿತಿ ಎಸ್‌.ಎಲ್‌. ಭೈರಪ್ಪ ಅವರು ಪದ್ಮಭೂಷಣ (ಸಾಹಿತ್ಯ ಮತ್ತು ಶಿಕ್ಷಣ) ಮತ್ತು ಇನ್ಫೋಸಿಸ್‌ ಮುಖ್ಯಸ್ಥೆ ಸುಧಾಮೂರ್ತಿಯವರ ಸಾಮಾಜಿಕ ಸೇವೆಗೆ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಖಾದರ್ ವಲ್ಲಿ ದೂದೇಕುಲ (ವಿಜ್ಞಾನ ಮತ್ತು ಇಂಜಿನಿಯರಿಂಗ್), ಎಂಎಸ್ ರಾಣಿ ಮಾಚಯ್ಯ (ಕಲೆ), ನಾಡೋಜ ಪಿಂಡಿಪಾಪನಹಳ್ಳಿ ಮುನಿವೆಂಕಟಪ್ಪ (ಕಲೆ), ಶಾ ರಶೀದ್ ಅಹ್ಮದ್ ಕ್ವಾದ್ರಿ (ಕಲೆ), ಎಸ್ ಸುಬ್ರಮಣ್ (ಇತರ ಕ್ಷೇತ್ರ) ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಸಕ್ತ ವರ್ಷ ಒಟ್ಟು 106 ಮಂದಿ ಆಯ್ಕೆಯಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

See also  ಕಾರವಾರ: ಡಿಸೆಂಬರ್ ತಿಂಗಳಿನಲ್ಲಿ ಕರಾವಳಿ ಉತ್ಸವ- ಕೋಟ ಶ್ರೀನಿವಾಸ ಪೂಜಾರಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು