News Kannada
Sunday, June 04 2023
ದೆಹಲಿ

ಹೊಸದಿಲ್ಲಿ: ಆರ್‌ಎಸ್‌ಎಸ್‌ ವಿರುದ್ಧ ಟೀಕೆ, ರಾಹುಲ್‌ ವಿರುದ್ಧ ಮಾನನಷ್ಟ ಮೊಕದ್ದಮೆ

People who defeated BJP's corruption: Rahul Gandhi
Photo Credit : Facebook

ಹೊಸದಿಲ್ಲಿ: ಮೋದಿ ಕುಲನಾಮದವರೆಲ್ಲ ಕಳ್ಳರೆಂದು ಹೇಳಿ ಇತ್ತೀಚೆಗಷ್ಟೇ, ಸೂರತ್ ಕೋರ್ಟ್‌ನಿಂದ ಶಿಕ್ಷೆಗೆ ಗುರಿಯಾಗಿ ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಂಡ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ವಿರುದ್ಧ ಮತ್ತೊಂದು ಮಾನನಷ್ಟ ಮೊಕದ್ದಮೆ ದಾಖಲಾಗಿದೆ.

ಭಾರತ್ ಜೋಡೊ ಯಾತ್ರೆಯ ಯಾತ್ರೆ ವೇಳೆ ಸಾರ್ವಜನಿಕವಾಗಿ ನೀಡಿದ ಹೇಳಿಕೆಯಿಂದ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಯಾತ್ರೆಯ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು 21 ನೇ ಶತಮಾನದ ಕೌರವರೊಂದಿಗೆ ರಾಹುಲ್ ಗಾಂಧಿ ಅವರು ಹೋಲಿಕೆ ಮಾಡಿದ್ದರು. ಆರ್‌ಎಸ್‌ಎಸ್‌ನವರು ಈಗ ಖಾಕಿ ಹಾಫ್ ಪ್ಯಾಂಟ್ ಧರಿಸಿದ್ದಾರೆ. ಕೈಯಲ್ಲಿ ಲಾರಿ ಹಿಡಿದು ಶಾಖಾಗಳಲ್ಲಿದ್ದಾರೆ. ಭಾರತದ 2-3 ಬಿಲಿಯನೇರ್‌ಗಳು ಕೌರವರ ಜತೆ ನಿಂತಿದ್ದಾರೆ ಎಂದು ರಾಹುಲ್‌ ಗಾಂಧಿ ಟೀಕಿಸಿದ್ದರು.

ಕೌರವರು ಟೀಕೆ ವಿರುದ್ಧ ಹರಿದ್ವಾರದ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಾಗಿದೆ. ಆರ್‌ಎಸ್‌ಎಸ್‌ ಸ್ವಯಂಸೇವಕ ಕಮಲ್ ಭಡೋರಿಯಾ ಎಂಬವರು ದೂರು ಸಲ್ಲಿಸಿದ್ದಾರೆ. ನ್ಯಾಯಾಲಯ ಏ.12 ರಂದು ಈ ದೂರಿನ ವಿಚಾರಣೆ ಕೈಗೆತ್ತಿಕೊಳ್ಳಲಿದೆ. ಭಾರತೀಯ ದಂಡ ಸಂಹಿತೆಯ 499 ಮತ್ತು 500 ಸೆಕ್ಷನ್‌ಗಳ ಅಡಿಯಲ್ಲಿ ದೂರು ದಾಖಲಾಗಿದೆ.

See also  ಬೆಳ್ತಂಗಡಿ: ಶ್ರೀ ರಾಘವೇಂದ್ರ ಮಠದಲ್ಲಿ ಮೂರು ದಿನ 351ನೇ ಆರಾಧನಾ ಮಹೋತ್ಸವ ಕಾರ್ಯಕ್ರಮ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

30409

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು