News Kannada
Tuesday, June 06 2023
ದೆಹಲಿ

ಏ.9ರ ನಂತರ ಬಿಜೆಪಿ ಅಭ್ಯರ್ಥಿಗಳ ಪಟ್ಟಿ, ಅಂತಿಮ ಹಂತದ ಆಯ್ಕೆ ಪ್ರಕ್ರಿಯೆ ದಿಲ್ಲಿಯಲ್ಲಿ

The BJP will form a legal team at the assembly constituency level.
Photo Credit : Facebook

ಹೊಸದಿಲ್ಲಿ: ಕರ್ನಾಟಕ ವಿಧಾನಸಭಾ ಚುನಾವಣೆಯ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಏ.9 ರಂದು ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿ ಸಭೆ ನಡೆಯಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮತ್ತು ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸದಸ್ಯರು ಪಾಲ್ಗೊಳ್ಳಲಿದ್ದಾರೆ.

ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಮೂವರ ಹೆಸರಿರುವ ಪಟ್ಟಿಯನ್ನು ರಾಜ್ಯ ಬಿಜೆಪಿ ಕಳುಹಿಸಿದ್ದು, ಈ ಪಟ್ಟಿ ಕುರಿತು ಕೇಂದ್ರ ಚುನಾವಣಾ ಸಮಿತಿ ಪರಿಶೀಲನೆ ನಡೆಸಲಿದೆ. ಬಳಿಕ ಪಕ್ಷದ ವರಿಷ್ಠರು ಅಭ್ಯರ್ಥಿಗಳನ್ನು ಅಂತಿಮಗೊಳಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಏ.4 ರಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ರಾಜ್ಯ ಬಿಜೆಪಿ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ಸಹ ಉಸ್ತುವಾರಿ ಮನ್ಸುಖ್ ಮಾಂಡವೀಯಾ, ಕೇಂದ್ರೀಯ ಚುನಾವಣಾ ಸಮಿತಿ ಸದಸ್ಯ ಅಣ್ಣಾಮಲೈ, ಮಾಜಿ ಉಪ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಾಲ್ಗೊಂಡಿದ್ದ ಸಭೆಯಲ್ಲಿ ಪಕ್ಷದ ಅಭ್ಯರ್ಥಿಗಳ ಕಿರುಪಟ್ಟಿ ಅಂತಿಮಗೊಳಿಸಲಾಗಿದೆ ಎನ್ನಲಾಗಿದೆ.

See also  ಮೈಸೂರು: ಎರಡು ದಿನಗಳ ಚೆಸ್ ಪಂದ್ಯಾವಳಿಗೆ ಚಾಲನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

30409

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು