ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆ ಕಾರ್ಯ ಕಾರ್ಯಕ್ರಮದಲ್ಲಿ ಸಚಿವರು, ಧಾರ್ಮಿಕ ಮುಖಂಡರು ಪಾಲ್ಗೊಂಡರು. ಈ ವೇಳೆ ಸರ್ವಧರ್ಮ ಪ್ರಾರ್ಥನೆ ಗಮನಸೆಳೆಯಿತು. ಸಿಖ್, ಮುಸ್ಲಿಂ, ಕ್ರೈಸ್ತ, ಜೈನ, ಬೌದ್ಧ, ಧರ್ಮದ ಪಂಡಿತರು ಪ್ರಾರ್ಥನೆ ನಡೆಸಿಕೊಟ್ಟರು. ಅಲ್ಲದೆ ಭಗವದ್ಗೀತೆಯ ಆಯ್ದ ಶ್ಲೋಕಗಳನ್ನು ಪಠಿಸಲಾಯಿತು.
ಪ್ರಾರ್ಥನಾ ಕಾರ್ಯಕ್ರಮ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ ಹೊರಗಡೆ ಸ್ಥಾಪಿಸಲಾದ ಗಾಂಧಿ ಪ್ರತಿಮೆಗೆ ನಮನ ಸಲ್ಲಿಸಿ ಪುನಃ ಗಣಪತಿ ಹೋಮ ನಡೆಯುತ್ತಿದ್ದ ವೇದಿಕೆ ಆಗಮಿಸಿ ಪೂರ್ಣಾಹುತಿಯಲ್ಲಿ ಪಾಲ್ಗೊಂಡರು. ಪೂಜೆಯ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ, ಸಚಿವ ಪ್ರಲ್ಹಾದ್ ಜೋಷಿ ಮೊದಲಾದವರು ಸಾಥ್ ನೀಡಿದರು.