News Kannada
Monday, December 11 2023
ದೆಹಲಿ

ಲಾಲು ಪ್ರಸಾದ್​​ ಯಾದವ್ ಕುಟುಂಬಕ್ಕೆ ಬಿಗ್​​​ ರಿಲೀಫ್

Big relief for Lalu Prasad Yadav's family
Photo Credit : IANS

ದೆಹಲಿ: ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್​​ ಯಾದವ್ ಹಾಗೂ ಅವರ ಪತ್ನಿ ರಾಬ್ರಿ ದೇವಿ ಮತ್ತು ಅವರ ಪುತ್ರ, ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌ಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.

ಯುಪಿಎ ಒಕ್ಕೂಟ ಸರ್ಕಾರದಲ್ಲಿ ರೈಲ್ವೆ ಸಚಿವರಾಗಿದ್ದ ಲಾಲು ಪ್ರಸಾದ್​​ ಯಾದವ್ ಅವರು ರೈಲ್ವೆ ಉದ್ಯೋಗಕ್ಕಾಗಿ ಭೂ ಹಗರಣ ಮಾಡಿದರು ಎಂದು ಜುಲೈನಲ್ಲಿ ಇಡಿ ಅವರ ಮೇಲೆ ಪ್ರಕರಣ ದಾಖಲಿಸಿಕೊಂಡಿತ್ತು. ಇದರ ಜತೆಗೆ ಅವರ ಆಸ್ತಿಯನ್ನು ಕೂಡ ಜಪ್ತಿ ಮಾಡಿತ್ತು. ಈ ಜಪ್ತಿಯಲ್ಲಿ ಅವರ ಮಗ, ಪ್ರಸ್ತುತ ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌ ಅವರಿಗೂ ನೋಟಿಸ್​​ ನೀಡಿ ಜಪ್ತಿ ಮಾಡಿತ್ತು. ನಂತರ ಲಾಲು ಪ್ರಸಾದ್​​ ಯಾದವ್ ಅವರ ಪತ್ನಿ ರಾಬ್ರಿ ದೇವಿ ಅವರಿಗೂ ನೋಟಿಸ್​​​ ನೀಡಿ, ಪ್ರಕರಣ ದಾಖಲಿಸಿತ್ತು.

ಇದೀಗ ಈ ಬೆಳವಣಿಗೆಯಲ್ಲಿ ರೂಸ್‌ ಅವೆನ್ಯೂ ನ್ಯಾಯಾಲಯವು ಜಾಮೀನು ನೀಡಿ ಲಾಲು ಕುಟುಂಬಕ್ಕೆ ರಿಲೀಫ್‌ ನೀಡಿದೆ.

See also  ಫೆಬ್ರವರಿ ನಂತರ ಮೊದಲ ಬಾರಿಗೆ 10 ಸಾವಿರದ ಗಡಿ ದಾಟಿದ ಕೊರೊನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು