ಹೊಸದಿಲ್ಲಿ: ಸಭೆಯ ಸ್ಪೀಕರ್ ಪೀಠದ ಬಳಿ ಐತಿಹಾಸಿಕ ‘ಸೆಂಗೊಲ್’ ಅನ್ನು ಸ್ಥಾಪಿಸಿದ ನಂತರ, ಪ್ರಧಾನಿ ನರೇಂದ್ರ ಮೋದಿ ನೂತನ ಸಂಸತ್ ಭವನದ ಉದ್ಘಾಟನಾ ಫಲಕವನ್ನು ಅನಾವರಣಗೊಳಿಸಿದರು.
‘ಪೂಜೆ’ ಮತ್ತು ‘ಹವನ’ದ ನಂತರ, ಪ್ರಧಾನಮಂತ್ರಿಯವರು ತಮಿಳುನಾಡಿನ ಸ್ವಾಮೀಜಿಗಳಿಂದ ತಿಹಾಸಿಕ ‘ಸೆಂಗೊಲ್’ ಅನ್ನು ಸ್ವೀಕರಿಸಿದರು. ಬಳಿಕ ಹೊಸ ಸಂಸತ್ತಿನ ಕಟ್ಟಡದೊಳಗೆ ಇರುವ ಲೋಕಸಭೆಯ ಸ್ಪೀಕರ್ ಕುರ್ಚಿಯ ಬಳಿ ಸೆಂಗೋಲ್ ಅದನ್ನು ಸ್ಥಾಪಿಸಿದರು. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಪ್ರಧಾನಿ ಜತೆಗಿದ್ದರು. ಇದೇ ವೇಳೆ ಸಂಸತ್ ಭವನದ ಫಲಕವನ್ನು ಪ್ರಧಾನಿ ಅನಾವರಣ ಗೊಳಿಸಿದರು. ನೂತನ ಸಂಸತ್ ಭವನದ ನಿರ್ಮಾಣದಲ್ಲಿ ತೊಡಗಿಸಿಕೊಂಡ ಕಾರ್ಮಿಕರಿಗೆ ಪ್ರಧಾನಿ ಶಾಲು ಮತ್ತು ಸ್ಮರಣಿಕೆ ನೀಡಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ, ಎಸ್.ಜೈಶಂಕರ್ ಮತ್ತು ಜಿತೇಂದ್ರ ಸಿಂಗ್, ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಉಪಸ್ಥಿತರಿದ್ದರು. ನಾಲ್ಕು ಅಂತಸ್ತಿನ ನೂತನ ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮವನ್ನು ಕಾಂಗ್ರೆಸ್ ಸೇರಿದಂತೆ 20 ವಿರೋಧ ಪಕ್ಷಗಳು ಬಹಿಷ್ಕರಿಸಿವೆ.