News Karnataka Kannada
Thursday, March 28 2024
Cricket
ದೆಹಲಿ

ಪ್ರಧಾನಿ ನೇತೃತ್ವದಲ್ಲಿ ನೀತಿ ಆಯೋಗ ಸಭೆ, 8 ರಾಜ್ಯದ ಸಿಎಂಗಳ ಗೈರು

meeting chaired by PM, CMs of 8 states absent
Photo Credit : News Kannada

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ನೀತಿ ಆಯೋಗದ 8 ನೇ ಆಡಳಿತ ಮಂಡಳಿಯ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಇದರಲ್ಲಿ ಹಲವಾರು ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದರು. ಪ್ರಗತಿ ಮೈದಾನದಲ್ಲಿ ನೂತನವಾಗಿ ನಿರ್ಮಿಸಿರುವ ಕನ್ವೆನ್ಷನ್ ಸೆಂಟರ್‌ನಲ್ಲಿ ಸಭೆ ನಡೆಯುತ್ತಿದೆ.

ರಾಜನಾಥ್ ಸಿಂಗ್, ನಿರ್ಮಲಾ ಸೀತಾರಾಮನ್, ಅಮಿತ್ ಶಾ, ಸ್ಮೃತಿ ಇರಾನಿ, ಧರ್ಮೇಂದ್ರ ಪ್ರಧಾನ್, ಪಿಯೂಷ್ ಗೋಯಲ್, ನರೇಂದ್ರ ಸಿಂಗ್ ತೋಮರ್ ಸೇರಿದಂತೆ ಹಲವು ಕೇಂದ್ರ ಸಚಿವರು ಪಾಲ್ಗೊಂಡಿದ್ದಾರೆ.

ಮುಖ್ಯಮಂತ್ರಿಗಳಾದ ಸುಖವಿಂದರ್ ಸಿಂಗ್ ಸುಖು (ಹಿಮಾಚಲ ಪ್ರದೇಶ), ಭೂಪೇಶ್ ಬಾಘೇಲ್ (ಛತ್ತೀಸ್‌ಗಢ), ಯೋಗಿ ಆದಿತ್ಯನಾಥ್ (ಉತ್ತರ ಪ್ರದೇಶ), ಶಿವರಾಜ್ ಸಿಂಗ್ ಚೌಹಾಣ್ (ಮಧ್ಯಪ್ರದೇಶ), ಪುಷ್ಕರ್ ಸಿಂಗ್ ಧಾಮಿ (ಉತ್ತರಾಖಂಡ), ಪೆಮಾ ಖಂಡು (ಅರುಣಾಚಲ ಪ್ರದೇಶ) , ಮಾಣಿಕ್ ಸಹಾ (ತ್ರಿಪುರ), ಮನೋಹರ್ ಲಾಲ್ ಖಟ್ಟರ್ (ಹರಿಯಾಣ), ಭೂಪೇಂದ್ರ ಪಟೇಲ್ (ಗುಜರಾತ್), ಪ್ರಮೋದ್ ಸಾವಂತ್ (ಗೋವಾ), ಕಾನ್ರಾಡ್ ಸಂಗ್ಮಾ (ಮೇಘಾಲಯ), ಏಕನಾಥ್ ಶಿಂಧೆ (ಮಹಾರಾಷ್ಟ್ರ), ಹೇಮಂತ್ ಸೊರೆನ್ (ಜಾರ್ಖಂಡ್), ಮತ್ತು ವೈಎಸ್ ಜಗನ್ ಮೋಹನ್ ರೆಡ್ಡಿ ( ಆಂಧ್ರ ಪ್ರದೇಶ) ಪಾಲ್ಗೊಂಡಿದ್ದಾರೆ.

ಸಭೆಯಲ್ಲಿ ಪಾಲ್ಗೊಳ್ಳದ ಮುಖ್ಯಮಂತ್ರಿಗಳು:
ಒಟ್ಟು ಎಂಟು ಮುಖ್ಯಮಂತ್ರಿಗಳು:  ಅರವಿಂದ್ ಕೇಜ್ರಿವಾಲ್ (ದೆಹಲಿ), ಮಮತಾ ಬ್ಯಾನರ್ಜಿ (ಪಶ್ಚಿಮ ಬಂಗಾಳ), ಭಗವಂತ್ ಮಾನ್ (ಪಂಜಾಬ್), ನಿತೀಶ್ ಕುಮಾರ್ (ಬಿಹಾರ), ಕೆ. ಚಂದ್ರಶೇಖರ ರಾವ್ (ತೆಲಂಗಾಣ), ಎಂ.ಕೆ. ಸ್ಟಾಲಿನ್ (ತಮಿಳುನಾಡು), ಅಶೋಕ್ ಗೆಹ್ಲೋಟ್ (ರಾಜಸ್ಥಾನ) ಮತ್ತು ಪಿಣರಾಯಿ ವಿಜಯನ್ (ಕೇರಳ) ಸಭೆಯಲ್ಲಿ ಪಾಲ್ಗೊಂಡಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು